Vijaypura

ಆತ್ಮ‌ ನಿರ್ಭರ ಎಂದು ಪ್ರತಿಪಾದಿಸುವವರು ಮೊದಲು ಲಸಿಕೆ ಹಾಕಿಸಿಕೊಳ್ಳಲಿ;ಮಾಜಿ ಸಚಿವ ಎಂ.ಬಿ.ಪಾಟೀಲ

Share

ಯಾವುದೇ ವ್ಯಾಕ್ಸಿನ್ ಮಾನ್ಯತೆ ನೀಡಬೇಕಾದರೆ 3ನೇ ಹಂತದ ಪ್ರಯೋಗ ಅವಶ್ಯವಿದೆ. ಈಗ ಲಸಿಕೆ ತುರ್ತು ಅವಶ್ಯಕವಿದೆ ನಿಜಾ, ಹಾಗಂತ ಸಂಪೂರ್ಣ ಪರೀಕ್ಷೆಯಾಗದೇ ಜನರ ಮೇಲೆ ಇದನ್ನು ಪ್ರಯೋಗ ಮಾಡುವಂತಿಲ್ಲ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ. ‌

ವಿಜಯಪುರ ದಲ್ಲಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ಕೊರೊನಾ ವ್ಯಾಕ್ಸಿನ್ ಬಗ್ಗೆ ಪ್ರತಿಪಕ್ಷಗಳ ಅಪಸ್ವರ ವಿಚಾರವಾಗಿ ಪ್ರತಿಕ್ರಿಯಿಸಿ ಆತ್ಮ ನಿರ್ಭರ ಹೆಸರಿನಲ್ಲಿ ಜನರ ಮೇಲೆ ಕೊರೊನಾ ಲಸಿಕೆ ಪ್ರಯೋಗ ಸರಿಯಲ್ಲ, ಮೊದಲು‌ ಲಸಿಕೆ ಎಲ್ಲ ಪರೀಕ್ಷೆಗಳು ಪೂರ್ಣವಾಗಲಿ, ರಷ್ಯಾ ಅಧ್ಯಕ್ಷ ಪುಟಿನ್ ಮಾದರಿಯಲ್ಲಿ ಇದನ್ನು ಸಮರ್ಥಿಸುವವರು ಮೊದಲು ಲಸಿಕೆ ಬಳಸಲಿ ಎಂದು ಸಲಹೆ ನೀಡಿದರು. ಇನ್ನೂ ಆತ್ಮ‌ ನಿರ್ಭರ ಎಂದು ಪ್ರತಿಪಾದಿಸು ವವರು ಮೊದಲು ಲಸಿಕೆ ಹಾಕಿಸಿಕೊಳ್ಳಲಿ ಎಂದು ಪ್ರಧಾನಿ ಹೆಸರೇಳದೆ ಎಂ. ಬಿ. ಪಾಟೀಲ ಸಲಹೆ ನೀಡಿದರು.

ಈ ವಿಷಯದಲ್ಲಿ ರಾಜಕೀಯ ಬೆರೆಸುವುದು ಸರಿಯಲ್ಲ, ಶಾಲೆ-ಕಾಲೇಜುಗಳು ಆರಂಭವಾಗಿವೆ,ಬವಿದ್ಯಾರ್ಥಿಗಳು, ಪೋಷಕರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಿದೆ, ಕೊರೊನಾ ಬಗ್ಗೆ ಮುನ್ನೆಚ್ಚರಿಕೆ ವಹಿಸಿಕೊಂಡು ಮುಂದಡಿ ಇಡಬೇಕಾಗಿದೆ ಎಂದು ತಿಳಿಸಿದ್ರು. ಇನ್ನೂ ಬ್ರಿಟನ್ ರೂಪಾಂತರ ಕೊರೊನಾ ವಿಚಾರವಾಗಿ ಪ್ರತಿಕ್ರಿಯಿಸಿ ಇದೆ ಬಗ್ಗೆ ಸಾಕಷ್ಟು ಅಧ್ಯಯನ ನಡೆಯಬೇಕಿದೆ ಎಂದು ಅಭಿಪ್ರಾಯ ಪಟ್ಟರು. ಬ್ರಿಟನ್ ಕೊರೊನಾ ಈಗ ಬೆಂಗಳೂರು, ಕೇರಳಕ್ಕೆ ಕಾಲಿಟ್ಟಿದೆ. ಸರಕಾರ ತಕ್ಷಣವೇ ತಜ್ಞರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಹಳೆಯ ಕೊರೊನಾ ಮಕ್ಕಳ ಮೇಲೆ ಅಷ್ಟೋಂದು ಪರಿಣಾಮ ಬೀರಿರಲಿಲ್ಲ, ಆದರೆ, ಬ್ರಿಟನ್ ಕೊರೊನಾ ಮಕ್ಕಳ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬುದರ ಬಗ್ಗೆ ಅಧ್ಯಯನ ನಡೆಯಬೇಕಿದೆ ಎಂದ್ರು. ಇನ್ನೂ ಬೆಳಗಾವಿ ಉಪಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಎಂ.ಬಿ.ಪಾಟೀಲ ಸಮಿತಿ ವತಿಯಿಂದ ಅಭ್ಯರ್ಥಿಗಳ ಪಟ್ಟಿಯನ್ನು ಕೆಪಿಸಿಸಿಗೆ ಕಳುಹಿಸಲಾಗಿದೆ, ಕೆಪಿಸಿಸಿ ವತಿಯಿಂದ ಎಐಸಿಸಿಗೆ ಪಟ್ಟಿ ಕಳುಹಿಸಿದ ಮೇಲೆ ಅಲ್ಲಿ ಅಂತಿಮ ಆಯ್ಕೆ ನಡೆಯಲಿದೆ, ಈ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮಾಜಿ ಸಚಿವ ಎಂ. ಬಿ. ಪಾಟೀಲ ಸ್ಪಷ್ಟಪಡಿಸಿದರು…

Tags:

error: Content is protected !!