ಮನೆಯಲ್ಲಿ ಕೆಲಸ ಮಾಡೋ ವಿಚಾರವಾಗಿ ಪತಿ ಪತ್ನಿ ನಡೆದ ಜಗಳ ಪತ್ನಿ ಕೊಲೆಯಲ್ಲಿ ಅಂತ್ಯವಾಗಿದೆ. ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ನಡೆದಿದೆ.
60 ವರ್ಷದ ನಾಗಮ್ಮ ( 60 ) ಪತಿಯಿಂದ ಕೊಲೆಯಾದ ಮಹಿಳೆಯಾಗಿದ್ದು ನಾಗಮ್ಮ ಪತಿ ಯಲ್ಲಪ್ಪ ನಿಂದ ಹೇಯ ಕೃತ್ಯ ನಡೆಸಿದ್ದಾನೆ. ಸ್ಥಳಕ್ಕೆ ಬಸವನಬಾಗೇವಾಡಿ ಸಿಪಿಐ ಸೋಮಶೇಖರ್ ಜುಟ್ಟಲ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಯಲ್ಲಪ್ಪನನ್ನು ವಶಕ್ಕೆ ಪಡೆದಿದ್ದು ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…