hubbali

ಮೋದಿ ವಿರೋಧಿಸುವ ಭರದಲ್ಲಿ ದೇಶ ವಿರೋಧಿಸಬೇಡಿ..ಕೈ ನಾಯಕರ ವಿರುದ್ಧ ಪ್ರಹ್ಲಾದ್ ಜೋಷಿ ಗರಂ

Share

ಕೊರೊನಾ ವ್ಯಾಕ್ಸಿನ್ ಮೊದಲು ಪ್ರಧಾನಿ ಮೋದಿ ತೆಗೆದುಕೊಳ್ಳಲಿ ಎಂಬ ಕಾಂಗ್ರೆಸ್ ನಾಯಕರ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮೋದಿಯನ್ನ ವಿರೋಧಿಸುವ ಭರದಲ್ಲಿ ದೇಶವನ್ನು ವಿರೋಧಿಸುವುದು ಬೇಡ ವಿಜ್ಞಾನಿಗಳಿಗೆ ಅಗೌರವ ತೋರುವುದು ಬೇಡ ತಿರುಗೇಟು ಕೊಟ್ಟಿದ್ದಾರೆ.

ಹುಬ್ಬಳ್ಳಿಯಲ್ಲಿ ಈ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮೋದಿ ಮೊದಲು ವ್ಯಾಕ್ಸಿನ್ ಮೊದಲು ತೆಗೆದುಕೊಳ್ಳಲಿ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಅವರನ್ನು ವಿರೋಧಿಸುವ ಭರದಲ್ಲಿ ದೇಶವನ್ನು ವಿರೋಧಿಸುವ ಕೆಲಸ ಕಾಂಗ್ರೆಸ್ ನಾಯಕರು ಮಾಡಬಾರದು. ದೇಶದ ವಿಜ್ಞಾನಿಗಳಿಗೆ ಅಗೌರವ ತೋರುವ ಕೆಲಸವನ್ನು ಮಾಡಬಾರದು ಎಂದು ಕಿಡಿಕಾರಿದರು.

ಬಿಜೆಪಿ 30 ಪಸೆರ್ಂಟ್ ಸರ್ಕಾರ ಎಂಬ ಕಾಂಗ್ರೆಸ್ಸಿಗರ ಆರೋಪಕ್ಕೆ ಇದೇ ವೇಳೆ ತಿರುಗೇಟು ಕೊಟ್ಟ ಪ್ರಹ್ಲಾದ್ ಜೋಷಿ ಕಾಂಗ್ರೆಸ್ ಬಗ್ಗೆ ಮಾತನಾಡುವುದೇ ಅಪ್ರಸ್ತುತ ಹಾಗೂ ಅಪಹಾಸ್ಯ ಎಂದು ವ್ಯಂಗ್ಯವಾಡಿದರು. ಇನ್ನು ಸಂಪುಟ ವಿಸ್ತರಣೆ ಸಂಬಂಧ ಮುಖ್ಯಮಂತ್ರಿಗಳು ದೆಹಲಿಗೆ ತೆರಳಿದ್ದಾರೆ. ಸಿಎಂ ಮತ್ತು ರಾಷ್ಟ್ರೀಯ ನಾಯಕರು ಕೂತು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಯಾವಾಗ ಸಂಪುಟ ವಿಸ್ತರಣೆ ಮಾಡಬೇಕು ಎಂಬುದು ವರಿಷ್ಠರಿಗೆ ಗೊತ್ತಿದೆ ಎಂದರು.

ಬಳಿಕ ಜನೆವರಿ 29ರಿಂದ ಫೆಬ್ರವರಿ 15ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ. ಜನವರಿ 30ರಂದು ಸರ್ವ ಪಕ್ಷದ ಸಭೆಯ ನಡೆಯಲಿದೆ ಮಾರ್ಚ್-8, ಏಪ್ರಿಲ್-8 ಎಂದು ಬಜೆಟ್ ಎರಡನೇ ಸೆಷನ್ ನಡೆಯಲಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಬಜೆಟ್ ಮಂಡಿಸಲಿದ್ದಾರೆ ಕರ್ನಾಟಕದ ಆದ್ಯತೆ ಪಟ್ಟಿಯನ್ನ ಕೇಂದ್ರಕ್ಕೆ ನೀಡಲಾಗಿದೆ ಎಂದು ಹೇಳಿದರು.
ಒಟ್ಟಾರೆ ಹುಬ್ಬಳ್ಳಿಯಲ್ಲಿ ಹಲವು ರಾಜಕೀಯ ವಿದ್ಯಾಮನಗಳ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮಾತನಾಡಿದ್ದಾರೆ.

 

Tags:

error: Content is protected !!