Uncategorized

ಸಂಪುಟದಲ್ಲಿ ಸ್ಥಾನ ಪಡೆಯಲು ದೆಹಲಿಗೆ ಹೋಗಿ ಚರ್ಚೆ: ಶಾಸಕ ಅರವಿಂದ ಬೆಲ್ಲದ

Share

 


ಬೆಳಗಾವಿಯಲ್ಲಿ ನಡೆಯಲಿರುವ ಜನಸೇವಕ ಸಮಾವೇಶದಲ್ಲಿ ಪಾಲ್ಗೊಳ್ಳಲು ಬಂದಿದ್ದೇವೆ. ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಶಾಸಕರಲ್ಲಿ ಅಸಮಾಧಾನ ಇರುವುದು ಸಹಜವಾದರೂ ಆ ಕುರಿತು ಪ್ರಸ್ತಾಪಿಸಲು ಇದು ಸ್ಥಳವಲ್ಲ. ದೆಹಲಿಗೆ ಹೋಗಿ ವರಿಷ್ಠರೊಂದಿಗೆ ಚರ್ಚಿಸುತ್ತೇವೆ ಎಂದು ಶಾಸಕ ಅರವಿಂದ ಬೆಲ್ಲದ ಪ್ರತಿಕ್ರಿಯಿಸಿದರು.

ಬೆಳಗಾವಿಯಲ್ಲಿ ನಡೆಯಲಿರುವ ಜನಸೇವಕ ಸಮಾವೇಶದಲ್ಲಿ ಕೇಂದ್ರ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಯಡಿಯೂರಪ್ಪ ಸೇರಿ ಬಿಜೆಪಿ ನಾಯಕರು ಪಾಲ್ಗೊಳ್ಳಲಿರುವ ಹಿನ್ನೆಲೆಯಲ್ಲಿ ಬೆಳಗಾವಿಗೆ ಆಗಮಿಸಿರುವ ಶಾಸಕ ಅರವಿಂದ ಬೆಲ್ಲದ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸಚಿವ ಅಮಿತ್ ಶಾ, ಮುಖ್ಯಮಂತ್ರಿ, ಸಚಿವರು, ಶಾಸಕರು, ಬಿಜೆಪಿ ಮುಖಂಡರು ಜನಸೇವಕ ಸಮಾವೇಶದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಬಂದಿದ್ದೇವೆ. ಸಂಪುಟದಲ್ಲಿ ಸ್ಥಾನ ಸಿಗದ ಷ ಅಸಮಾಧಾನ ಶಾಸಕರಲ್ಲಿ ಇರುವುದು ಸಹಜ. ಅದನ್ನು ನಾವು ಭೇಟಿಯಾದಾಗ ಚರ್ಚಿಸಿದ್ದೇವೆ. ಆದರೆ ಈ ಕುರಿತು ಪ್ರಸ್ತಾಪಿಸಲು ಇದು ಸ್ಥಳವಲ್ಲ. ದೆಹಲಿಗೆ ಹೋಗಿ ವರಿಷ್ಠರೊಂದಿಗೆ ಮಾತನಾಡುತ್ತೇವೆ. ಇನ್ನು ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.

ಒಟ್ಟಿನಲ್ಲಿ ಜನಸೇವಕ ಸಮಾವೇಶದಲ್ಲಿ ಪಾಲ್ಗೊಳ್ಳಲು ಶಾಸಕ ಅರವಿಂದ ಬೆಲ್ಲದ ಬೆಳಗಾವಿಗೆ ಬಂದಿದ್ದು, ಈ ವೇಳೆ ಶಾಸಕರ ಅಸಮಾಧಾನ ಕುರಿತಂತೆ ನಾಯಕರೊಂದಿಗೆ ಏನನ್ನೂ ಮಾತನಾಡುವುದಿಲ್ಲ ಎಂದು ತಿಳಿಸಿದರು.

 

Tags:

error: Content is protected !!