Belagavi

ಹುಲಕುಂದ ಪಂಚಾಯ್ತಿ 13 ಸದಸ್ಯರು, 30ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ

Share

ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮ ಪಂಚಾಯತಿಯ 14 ಸದಸ್ಯರ ಪೈಕಿ 13 ಸದಸ್ಯರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಹೌದು ಮಂಗಳವಾರ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮ ಪಂಚಾಯತಿಯ 13 ಸದಸ್ಯರು ಹಾಗೂ 30ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ವೇಳೆ ಸತೀಶ ಜಾರಕಿಹೊಳಿ ಪಕ್ಷದ ಶಾಲು ಹೊದಿಸಿ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು.

: ಈ ವೇಳೆ ಮಾತನಾಡಿದ ಸತೀಶ ಜಾರಕಿಹೊಳಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತವನ್ನು ಒಪ್ಪಿ ಇಂದು ಹುಲಕುಂದ ಗ್ರಾಮ ಪಂಚಾಯತಿಯಿಂದ ಆಯ್ಕೆಯಾಗಿರುವ 13 ಸದಸ್ಯರು ಹಾಗೂ 30ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಸಂತದ ತಂದಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸೋಣ ಎಂದು ಕರೆ ನೀಡಿದರು.

: ಈ ವೇಳೆ ಜಿ.ಪಂ.ಉಪಾಧ್ಯಕ್ಷ ಅರುಣ್ ಕಟಾಂಬಳೆ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.

Tags:

error: Content is protected !!