Belagavi

ನಿಜಶರಣ ಅಂಬಿಗರ ಚೌಡಯ್ಯಾ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

Share

ಬೆಳಗಾವಿ: ಕರ್ನಾಟಕದ ನಿಜಶರಣ ಅಂಬಿಗರ ಚೌಡಯ್ಯಾ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿನಲ್ಲಿ ಅಂಬಿಗ ಮತ್ತು ಅದರ ಉಪಜಾತಿಗಳ ಸಮಾಜಕ್ಕೆ ಸೇರಿದ CET ಮೂಲಕ ಉಚಿತ ಪ್ರವೇಶ ಪಡೆದು ಇಂಜನೀಯರಿಂಗ್, ವೈದ್ಯಕೀಯ, ಇತರೇ ವೃತ್ತಿಪರ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನಿಗಮದ ವೆಬ್‍ಸೈಟ್ https://ambigaradevelopment.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಅಥವಾ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವ ಸಾಧ್ಯವಾಗದೇ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಂದಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿಗೆ ಜನೇವರಿ 30 ರೊಳಗೆ ಸಲ್ಲಿಸುಬೆಕೆಂದು ನಿಜಶರಣ ಅಂಬಿಗರ ಚೌಡಯ್ಯಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:

error: Content is protected !!