Banglore

ಸಾಹಿತಿ ಭಗವಾನ್ ಮುಖಕ್ಕೆ ಮಸಿ ಹಚ್ಚಿದ ವಕೀಲೆ ಮೀರಾ ರಾಘವೇಂದ್ರ

Share

ಹಿಂದು ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎನ್ನಲಾಗುತ್ತಿರುವ ಹಿರಿಯ ಸಾಹಿತಿ ಕೆ.ಎಸ್.ಭಗವಾನ್ ಮುಖಕ್ಕೆ ವಕೀಲೆ ಓರ್ವರು ಮಸಿ ಬಳಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹೌದು ಬೆಂಗಳೂರಿನ 2ನೇ ಎಸಿಎಂಎಂ ನ್ಯಾಯಾಲಯದ ಆವರಣದಲ್ಲಿ ಈ ಘಟನೆ ನಡೆದಿದ್ದು. ಹಿಂದು ಧರ್ಮಕ್ಕೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಮೀರಾ ರಾಘವೇಂದ್ರ ಖಾಸಗಿ ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ಭಗವಾನ್‍ರವರು ಇಂದು ಕೋರ್ಟ್‍ಗೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದಾದ ಬಳಿಕ ಭಗವಾನ್ ಅವರು ಕೋರ್ಟ್‍ನಿಂದ ಹೊರಗೆ ಬಂದಾಗ ಮೀರಾ ರಾಘವೇಂದ್ರ ಭಗವಾನ್ ಅವರ ಮುಖಕ್ಕೆ ಮಸಿ ಬಳಿದಿದ್ದಾರೆ. ಸಧ್ಯ ಇದು ತೀವ್ರ ಚರ್ಚೆಗೆ ಗ್ರಾಸವಾಗಿದ್ದು. ಈ ಸಂಬಂಧ ವಕೀಲೆ ಮೀರಾ ರಾಘವೇಂದ್ರ ಕೆ.ಎಸ್.ಭಗವಾನ್ ದೂರು ಸಲ್ಲಿಸಿದ್ದಾರೆ.

Tags:

error: Content is protected !!