State

ಕೊಟ್ಟ ಮಾತಿನಂತೆ ಅಜ್ಜಿಗೆ ಮನೆ ಕಟ್ಟಿಸಿಕೊಟ್ಟ ಸಿಎಂ: ಹೊಸ ಮನೆಯಲ್ಲಿ ಕಮಲವ್ವನ ಸಂಕ್ರಾಂತಿ..!

Share

ಪ್ರವಾಹಕ್ಕೆ ಸೂರು ಕಳೆದುಕೊಂಡ ವೃದ್ಧೆಗೆ ನಾಲ್ಕೇ ತಿಂಗಳಲ್ಲಿ ಮನೆ ಕಟ್ಟಿಸಿ ಕೊಡುವ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ.

ಹೌದು ಸಿಎಂ ಬಸವರಾಜ ಬೊಮ್ಮಾಯಿ ಅವರ ಸ್ವಕ್ಷೇತ್ರ ಶಿಗ್ಗಾಂವಿಯ ಮಂಚಿನಕೊಪ್ಪ ಗ್ರಾಮದ ಕಮಲವ್ವ ತಿಮ್ಮನಗೌಡ್ರ ತಮಗೆ ಮನೆ ನಿರ್ಮಿಸಿಕೊಡುವಂತೆ ಖಾಸಗಿ ವಾಹಿನಿಯ ಸಂದರ್ಶನ ಕಾರ್ಯಕ್ರಮದಲ್ಲಿ ಮನವಿ ಮಾಡಿಕೊಂಡಿದ್ದರು. ಇಬ್ಬರೂ ಗಂಡುಮಕ್ಕಳು ಸತ್ತ ಹೋಗ್ಯಾರ, ಮನಿ ಕಟ್ಟಸಿಕೊಡ್ರಿ ಸಾಹೇಬ್ರ ಎಂದು ಗದ್ಗದಿತಳಾಗಿ ನುಡಿದ ಕಮಲವ್ವನಿಗೆ ಅಂದು ಸಾಂತ್ವನ ಹೇಳಿದ್ದ ಮುಖ್ಯಮಂತ್ರಿಗಳು ಕಮಲವ್ವ ಸ್ವಂತ ಸೂರಿನಡಿ ಸಂಕ್ರಾಂತಿ ಆಚರಿಸುವಂತೆ ಮಾಡಿದ್ದಾರೆ.

ಅವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಜಿಲ್ಲಾಡಳಿತಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಅದರಂತೆ ನಾಲ್ಕೇ ತಿಂಗಳಿನಲ್ಲಿ ಮನೆ ನಿರ್ಮಿಸಿ, ಸಂಕ್ರಾಂತಿಯಂದು ಕಮಲವ್ವನಿಗೆ ಮನೆಯನ್ನು ಹಸ್ತಾಂತರಿಸಲಾಯಿತು. ಹ್ಯಾಬಿಟ್ಯಾಟ್ ಸೆಂಟರ್ ಮೂಲಕ ನಿರ್ಮಿಸಲಾದ ಸುಸಜ್ಜಿತ ಮನೆಯನ್ನು ಸವಣೂರ ಉಪ ವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ಅವರು ಹಸ್ತಾಂತರಿಸಿದರು. ಇನ್ನು ಸ್ವಂತ ಮನೆಯಲ್ಲಿಯೇ ಕಮಲವ್ವ ಸಂಕ್ರಾಂತಿ ಹಬ್ಬ ಆಚರಿಸುವಂತಾಗಿದ್ದು. ಮನೆ ಕಟ್ಟಿಸಿ ಕೊಟ್ಟ ಸಿಎಂ ಬೊಮ್ಮಾಯಿ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

Tags:

error: Content is protected !!