ಮುಸ್ಲಿಂ ಸಮಾಜ ಬಾಂಧವರ ಮಕ್ಕಳಿಗೆ ಶಿಕ್ಷಣ ನೀಡಲು ಆದ್ಯತೆ ನೀಡುವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.

ಯಮಕನಮರಡಿ ಪಟ್ಟಣದಲ್ಲಿ ನಿರ್ಮಿಸಿದ ನೂತನ ಶಾದಿ ಮಹಲ್ ಕಟ್ಟಡ ಉದ್ಘಾಟಿಸಿ ಮಾತನಾಡಿದ ಸತೀಶ ಜಾರಕಿಹೊಳಿ ಅವರು, ಮತಕ್ಷೇತ್ರದಲ್ಲಿ ಅನೇಕ ಅಂಬೇಡ್ಕರ್ ಭವನ, ವಾಲ್ಮೀಕಿ ಭವನ, ಶಾದಿ ಮಹಲ್ ಗಳನ್ನು ನಿರ್ಮಿಸಲಾಗಿದೆ. ಇವುಗಳನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಯಮಕನಮರಡಿಯಲ್ಲಿ ಶಾದಿ ಮಹಲ್ ನಿರ್ಮಿಸಬೇಕು ಎಂದು ಮುಸ್ಲಿಂ ಬಾಂಧವರ ಬೇಡಿಕೆಯಾಗಿತ್ತು. ಅನುದಾನ ಕೊರತೆಯಿಂದ ಶಾದಿ ಮಹಲ್ ಕಟ್ಟಡ ನಿರ್ಮಾಣ ಕಾರ್ಯ ವಿಳಂಬವಾಯಿತು. ಆದರೆ ಇಂದು ನಿಮ್ಮ ಬೇಡಿಕೆ ಈಡೇರಿದೆ. ಈ ಕಟ್ಟಡ ನಿರ್ಮಾಣಕ್ಕೆ ಸ್ಥಳೀಯ ಮಟ್ಟದ ಅಧಿಕಾರಿಗಳು, ಮುಖಂಡರು ಸಹಕಾರ ನೀಡಿದ್ದಾರೆ ಎಂದರು.
ಶ್ರೀ ರಾಚೋಟಿ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಈ ವೇಳೆ ಹಾಜಿ ಶರೀಫ್ ಇಮಾಮಸಾಬ ಬೇಪಾರಿ, ಮಾಜಿ ಸಚಿವ ಎ.ಬಿ. ಪಾಟೀಲ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೌಲಾನ ಹಾರುಣಸಾಬ ಶಾಹೀ ಮಜಹಿರಿ, ವೀರಣ್ಣ ತುಬಚಿ, ಕಿರಣಸಿಂಗ ರಜಪೂತ, ರವೀಂದ್ರ ಜಿಂಡ್ರಾಳಿ, ಶೌಕತ ಅಲಿ ಮಹಮ್ಮದ್ ಹುಸೇನ್ ಖಾಜಿ ಸೇರಿದಂತೆ ಇತರರು ಇದ್ದರು.