ಮಕ್ಕಳಲ್ಲಿ ಕೊರೊನಾ ಲಕ್ಷಣಗಳು ಹೆಚ್ಚಾಗುತ್ತಿದೆ. ಮಕ್ಕಳ ಚಿಕಿತ್ಸೆಗೆ ಔಷಧಿ ಕೊರತೆ ಆಗದಂತೆ ಕ್ರಮ ವಸತಿ ಶಾಲೆಗಳ ಬಂದ್ ಬಗ್ಗೆ ಡಿಸಿಗಳಿಗೆ ಜವಾಬ್ದಾರಿ ಕೊಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.

ಸಿಎಂ ಬೊಮ್ಮಾಯಿ ವಿಡಿಯೋ ಕಾನ್ಫರೆನ್ಸ ಸಭೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿ ಸಚಿವ ಆರಗ ಜ್ಞಾನೇಂದ್ರ ಹೆಚ್ಚಿನ ಮಾಹಿತಿ ನೀಡಿದ್ದಾರೆ. ಮಾರ್ಕೆಟ್ಗಳನ್ನು ಬೇರೆ ಬೇರೆ ಕಡೆ ತೆರೆಯಲು ಚರ್ಚೆ ನಡೆಸಲಾಗಿದೆ. ಒಂದೇ ಕಡೆ ಜನಜಂಗುಳಿ ತಡೆಗಟ್ಟಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.