ವಿಧಾನಸಭೆಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ನಡುವೆ ಮಾತಿನ ಯುದ್ಧ ನಡೆದಿದೆ. ಈಶ್ವರಪ್ಪ ರಾಷ್ಟ್ರದ್ರೋಹಿ ಎಂದು ಡಿಕೆಶಿ ಕೂಗುತ್ತಿದ್ದಂತೆ ಈಶ್ವರಪ್ಪ ನಾನಲ್ಲ ರಾಷ್ಟ್ರದ್ರೋಹಿ ನೀನು ಎಂದು ವಾಗ್ದಾಳಿ ನಡೆಸಿದರು.

ವಾ.ಓ: ಇಂದು ಈಶ್ವರಪ್ಪ ಮತ್ತು ಡಿಕೆ ಶಿವಕುಮಾರ್ ಇಬ್ಬರು ನಾಯಕರು ಮಾತಿನ ಜಗಳಕ್ಕೆ ವಿಧಾನಸಭೆ ಸಾಕ್ಷಿಯಾಯಿತು. ಕೆಲದಿನಗಳ ಹಿಂದೆ ಈಶ್ವರಪ್ಪ ರಾಷ್ಟ್ರಧ್ವಜದ ಬಗ್ಗೆ ನೀಡಿದ್ದ ಹೇಳಿಕೆಗೆ ಇಂದು ವಿಧಾನಸಭೆಯಲ್ಲಿ ಕೋಲಾಹಲ ಸೃಷ್ಟಿಸಿತು. ಈಶ್ವರಪ್ಪ ಮಾತಿನ ಬಗ್ಗೆ ಸಿದ್ದರಾಮಯ್ಯ ಧ್ವನಿ ಎತ್ತುತ್ತಿದ್ದಂತೆ, ಡಿ.ಕೆ ಶಿವಕುಮಾರ್, ಈಶ್ವರಪ್ಪ ವಿರುದ್ಧ ವಾಕ್ಸಮರ ನಡೆಸಿದರು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಈಶ್ವರಪ್ಪ ಹೇಳಿಕೆಯ ಬಗ್ಗೆ ಅವರ ಅಭಿಪ್ರಾಯ ಕೇಳುತ್ತೇನೆ ಎಂದಾಗ, ದೇಶದ್ರೋಹ ಮಾಡಿವರೊಂದಿಗೆ ಏನು ಉತ್ತರ ಕೇಳುತ್ತೀರಿ ಎಂದು ಡಿಕೆಶಿ ಪ್ರಶ್ನಿಸಿದರು. ಶಿವಕುಮಾರ್ ಮಾತಿಗೆ ಸಿಟ್ಟಿಗೆದ್ದ ಈಶ್ವರಪ್ಪ ರಾಷ್ಟ್ರ ದ್ರೋಹಿ ಅವನು, ಜೈಲಿಗೆ ಹೋಗಿ ಬಂದವನು ನನಗೇನು ಹೇಳೋದು, ಬೇಲ್ನಲ್ಲಿ ಇದ್ದೀಯಾ, ನೀನು ರಾಷ್ಟ್ರ ದ್ರೋಹಿ ನೀನು ನನಗೆ ಹೇಳಬೇಡ ಎಂದು ಡಿಕೆಶಿ ವಿರುದ್ಧ ಕಿಡಿಕಾರಿದರು. ಸದನದಲ್ಲಿ ಕೆಲಕಾಲ ಏಕವಚನದಲ್ಲಿ ಇಬ್ಬರೂ ಕೈ, ಕೈ ತೋರಿಸಿಕೊಂಡು ಕೂಗಾಡಿದರು.
ಡಿಕೆಶಿ ಮತ್ತು ಈಶ್ವರಪ್ಪ ಕೂಗಾಟ ಹೆಚ್ಚಾಗುತ್ತಿದ್ದಂತೆ ಮಧ್ಯಪ್ರವೇಶಿಸಿದ ಸ್ಪೀಕರ್, ನೀವೆಲ್ಲ ಹಿರಿಯ ಸದಸ್ಯರು, ಏಕೆ ಹೀಗೆ ಆಡ್ತೀರಿ..? ನನಗೆ ಮನವರಿಕೆ ಆಗಬೇಕಲ್ಲವಾ..? ನಿಮ್ಮನ್ನು ನೋಡಿದರೆ ಏನ್ ಮನವರಿಕೆ ಆಗುತ್ತೆ..? ರೀ ಶಿವಕುಮಾರ್ ನೀವು ಹೇಗೆ ನಡೆದುಕೊಳ್ತಿದ್ದೀರಿ..? ನೀವು ಒಂದು ಪಕ್ಷದ ಅಧ್ಯಕ್ಷರು ಎಂದು ಸ್ಪೀಕರ್ ಗರಂ ಆದರು.
ಬಳಿಕ ಸದನದ ಬಾವಿಗಿಳಿದು ಕಾಂಗ್ರೆಸ್ ಪಕ್ಷದ ಶಾಸಕರು ಪ್ರತಿಭಟನೆ ನಡೆಸಿದರು. ಈ ವೇಳೆ ಮಾರ್ಷಲ್ಗಳು ಸಭಾಂಗಣದ ಒಳಗೆ ಹೋಗಿ ನಿಂತರು. ಒಂದು ಹಂತದಲ್ಲಿ ಡಿಕೆಶಿ ಮತ್ತು ಈಶ್ವರಪ್ಪ ಕೈ, ಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದರು. ಈಶ್ವರಪ್ಪ ಮೇಲೆ ಬೈರತಿ ಸುರೇಶ್, ಪ್ರಿಯಾಂಕ್ ಖರ್ಗೆ ಕೂಡ ಕೂಗಾಡಿದರು. ಈ ವೇಳೆ ಈಶ್ವರಪ್ಪ ಬೆಂಬಲಕ್ಕೆ ರೇಣುಕಾಚಾರ್ಯ ನಿಂತರು. ಆ ಬಳಿಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಇಬ್ಬರನ್ನು ಕೂಡ ಮನವೊಲಿಸಲು ಪ್ರಯತ್ನ ಪಟ್ಟರು. ಎರಡೂ ಪಕ್ಷಗಳ ನಾಯಕರ ಗದ್ದಲ ಹೆಚ್ಚಾಗುತ್ತಿದ್ದಂತೆ ಸದನವನ್ನು ಸ್ಪೀಕರ್ ಕಾಗೇರಿ ಮುಂದೂಡಿದರು.