Belagavi

ಉದ್ಯಮಿ ರವಿಕಿರಣ್ ಭಟ್ ಕಿಡ್ನಾಪ್ ಕೇಸ್‍ಗೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳು ಅರೆಸ್ಟ್- ಡಾ.ಬೋರಲಿಂಗಯ್ಯ

Share

ಕ್ರಿಪೆÇ್ಟೀಕರೆನ್ಸಿ ವ್ಯವಹಾರ ನಡೆಸುತ್ತಿದ್ದ ಉದ್ಯಮಿ ರವಿಕಿರಣ್ ಭಟ್ ಕಿಡ್ನಾಪ್ ಕೇಸ್‍ಗೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಡಾ. ಬೋರಲಿಂಗಯ್ಯ ಹೇಳಿದ್ದಾರೆ.

ಬೆಳಗಾವಿಯ ತಮ್ಮ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡದ ಡಾ. ಬೋರಲಿಂಗಯ್ಯ, ರವಿಕಿರಣ್ ಭಟ್ ತಮ್ಮನ್ನು ಅಪಹರಣ ಮಾಡಿ, ಕಟ್ಟಿ ಕೂಡಿ ಹಾಕಿ ಕುಕುಳ ನೀಡಿದ್ದಾರೆ. ಮತ್ತು ಶೋಶಣೆ ಮಾಡಿದ್ದಾರೆ ಎಂದು ದೂರು ನೀಡಿದ್ದರು. ಈ ದೂರಿನನ್ವರ ನಾವು 8 ಜನ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದೆವು. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮತ್ತೋರ್ವ ಆರೋಪಿ ಯೂನೂಸ್ ಖಾಜಿಗಾಗಿ ಶೋಧಕಾರ್ಯ ನಡೆದಿದೆ.

ಹಾಗಾಗಿ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಸಾಂಗಲಿಯ ಶಹನವಾಜ್, ಚಮನಶೇಖ್, ಅಜ್ಜು ಚಮನಶೇಖ್, ಅಭಿμÉೀಕ ಶೆಟ್ಟಿ ಎಂಬವರನ್ನು ಬಂಧಿಸಲಾಗಿದೆ. ಇನ್ನ ತಲೆಮರೆಸಿಕೊಂಡಿರುವ ಬೆಳಗಾವಿ ಮೂಲದ ಯೂನೂಸ್ ಖಾಜಿಗಾಗಿ ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ ಎಂದರು.

ಬಿಟ್‍ಕಾಯಿನ್ ವ್ಯವಹಾರದಲ್ಲಿ ವಂಚನೆ ಹಿನ್ನೆಲೆ ರವಿಕಿರಣ್ ಭಟ್ ಅಪಹರಣ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗುತ್ತಿದೆ. ರವಿಕಿರಣ್ ಭಟ್‍ರನ್ನ ಕಿಡ್ನಾಪ್ ಮಾಡಿದ ಕಿರಾತಕರು 3 ಕೋಟಿ ಹಣದ ಬೇಡಿಕೆ ಇಟ್ಟಿದ್ದರು. ಕಿಡ್ನಾಪ್ ಆಗಿದ್ದ ಉದ್ಯಮಿ ರವಿಕಿರಣ್ ಭಟ್ ವಿರುದ್ಧ ಮಹಾರಾಷ್ಟ್ರದ ಸೊಲ್ಲಾಪುರದ ಖಾಸಗಿ ಬ್ಯಾಂಕ್‍ನ ಮಾಜಿ ಮ್ಯಾನೇಜರ್ ವಂಚನೆ ಆರೋಪ ಮಾಡಿದ್ದರು.

ರವಿಕಿರಣ್ ಭಟ್ ಎರಡು ಕೋಟಿ ರೂ. ಪಡೆದು ವಂಚನೆ ಮಾಡಿದ ಆರೋಪದ ಬಗ್ಗೆ ವಿಡಿಯೋ ಹೇಳಿಕೆ ನೀಡಿದ್ದರು. ಬಿಟ್‍ಕಾಯಿನ್ ನಲ್ಲಿ ಹೂಡಿಕೆ ಮಾಡಿ ಹಣ ಡಬಲ್ ಮಾಡಿಕೊಡ್ತೀನಿ ಅಂತಾ ರವಿಕಿರಣ್ ಭಟ್ ವಂಚಿಸಿದ್ದಾರೆ ಎಂದು ಹೇಳಿದ್ದರು. ರವಿಕಿರಣ್ ಭಟ್ ವಿರುದ್ಧ ಆರೋಪ ಮಾಡಿದ್ದ ಸೊಲ್ಲಾಪುರದ ಕರಮಾಳಾ ಬಂಧನ್ ಬ್ಯಾಂಕ್ ಮಾಜಿ ಉದ್ಯೋಗಿಯ ವಿರುದ್ಧ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಇನ್ನು ಈಗಾಲೇ ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು 11ಜನರನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಇನ್ನೋರ್ವ ಆರೋಪಿಗಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ. ಇನ್ನು ತನಿಖೆ ಮುಂದುವರೆಯುತ್ತಿದ್ದು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Tags:

error: Content is protected !!