State

ಐಪಿಎಸ್ ರವಿ ಚನ್ನಣ್ಣನವರ ವಿರುದ್ಧ ತನಿಖೆ ನಡಿತಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ

Share

ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ವಿರುದ್ಧ ಭ್ರμÁ್ಟಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂದಿರುವ ದೂರು ಆಧರಿಸಿ ತನಿಖೆ ಶುರುವಾಗಿದೆ. ಯಾರು ಬೇಕಾದರೂ ಯಾರ ಮೇಲೆ ಬೇಕಾದರೂ ಆರೋಪ ಮಾಡಬಹುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.

: ರವಿ ಚನ್ನಣ್ಣನವರ ಮೇಲೆ ಕೇಳಿ ಬಂದಿರುವ ಭ್ರಷ್ಟಾಚಾರ ಆರೋಪದ ಬಗ್ಗೆ ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಈ ಬಗ್ಗೆ ತನಿಖೆ ಶುರುವಾಗಿದೆ. ಅದು ನಿಜನಾ..? ಸುಳ್ಳಾ ಎಂಬುದು ತನಿಖೆಯಿಂದಲೇ ಗೊತ್ತಾಗಬೇಕಿದೆ. ತನಿಖೆ ಆಗುತ್ತಿದೆ. ಯಾರು ಬೇಕಾದರೂ ಯಾರ ಮೇಲಾದ್ರೂ ಆರೋಪ ಮಾಡಬಹುದು ಎಂದರು.

ಇನ್ನೂ ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ವರ್ಗಾವಣೆ ಶಿಕ್ಷೆಯಲ್ಲ. ಸರ್ಕಾರ ಆಗಾಗ ವರ್ಗಾವಣೆ ಮಾಡುತ್ತಿದೆ. ಇದು ಶಿಕ್ಷೆಯೋ..? ಆಪಾದನೆಯೋ..? ಅಲ್ಲ ರವಿ ಚನ್ನಣ್ಣನವರ್ ಅವರ ವರ್ಗಾವಣೆ ಆಡಳಿತಾತ್ಮಕ ನಿರ್ಧಾರ ಅಷ್ಟೇ ಎಂದು ಗೃಹ ಸಚಿವರು ಸಮರ್ಥಿಸಿಕೊಂಡರು.

ಇನ್ನು ಎಲ್ಲಿಯವರೆಗೂ ಸಾರ್ವಜನಿಕರು ಹೊಣೆಗಾರಿಕೆ ಅರಿಯುವುದಿಲ್ಲ. ಅಲ್ಲಿಯವರೆಗೂ ಪೆÇಲೀಸರಿಂದ ಕಾನೂನಾತ್ಮಕ ಕ್ರಮ ಅನಿವಾರ್ಯ. ಜನರು ಅಡ್ಡಾದಿಡ್ಡಿ ವಾಹನ ನಿಲ್ಲಿಸುವುದರಿಂದ ಸಮಸ್ಯೆಯಾಗುತ್ತಿದೆ. ಖಾಸಗಿಯವರಿಂದ ಟೋಯಿಂಗ್ ವೇಳೆ ಜನರಿಗೆ ಸಮಸ್ಯೆಯಾಗುತ್ತಿದೆ. ಹೆಚ್ಚು ಕಮಿಷನ್‍ಗಾಗಿ ತೊಂದರೆ ನೀಡಿರುವುದು ಸತ್ಯ. ಹೀಗಾಗಿ ಸದ್ಯಕ್ಕೆ ಟೋಯಿಂಗ್ ನಿಲ್ಲಿಸಲಾಗಿದೆ. ಇಂದು ಸಂಜೆ ಸಭೆ ಇದೆ, ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.

ಒಟ್ಟಿನಲ್ಲಿ ಐಪಿಎಸ್ ರವಿ ಚನ್ನಣ್ಣನವರ ವಿರುದ್ಧ ತನಿಖೆ ನಡೆಯಬೇಕಿದೆ, ತನಿಖೆ ಪೂರ್ಣ ಬಳಿಕವೇ ಸತ್ಯಾಸತ್ಯತೆ ಹೊರಗೆ ಬರಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

Tags:

error: Content is protected !!