ಕಲ್ಯಾಣ ಕರ್ನಾಟಕ ಭಾಗದ ಜನಪ್ರನಿಧಿಗಳು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಸತ್ಕರಿಸಿ ಗೌರವಿಸಿದರು.
ಹೌದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಪ್ರಸಕ್ತ ಸಾಲಿನ 3 ಮತ್ತು 4ನೇ ಕಂತಿನ 731 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದಕ್ಕಾಗಿ ಸಿಎಂ ಬೊಮ್ಮಾಯಿ ಅವರಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್ ಅವರು ಬೆಂಗಳೂರಿನಲ್ಲಿ ಇಂದು ಧನ್ಯವಾದ ಅರ್ಪಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಹಾಲಪ್ಪ ಆಚಾರ್, ಶಾಸಕರಾದ ದೊಡ್ಡನಗೌಡ ಪಾಟೀಲ್ ಉಪಸ್ಥಿತರಿದ್ದರು.