ಡಿ.ಕೆ.ಶಿವಕುಮಾರ್ ಮಾಹಿತಿ ಇಲ್ಲದೇ ಮಾತನಾಡಿದ್ದಾರೆ. ರಾಷ್ಟ್ರಧ್ವಜ ಕಾಲೇಜು ಆವರಣದಲ್ಲಿ ಹಾರಾಡುತ್ತಿರಲಿಲ್ಲ. ಅವರು ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಕಾಲೇಜು ಆವರಣದಲ್ಲಿ ರಾಷ್ಟ್ರಧ್ವಜ ಹಾರುತ್ತಿರಲಿಲ್ಲ. ಅದು ಪುರಸಭೆ, ಕೋರ್ಟ್ ಮತ್ತು ವಿಧಾನಸೌಧದಲ್ಲಿ ಮಾತ್ರ ರಾಷ್ಟ್ರಧ್ವಜ ಹಾರುತ್ತದೆ. ಡಿಕೆಶಿ ಬೇಜವಾಬ್ದಾರಿ ಮಾತನಾಡಿದ್ದಾರೆ, ಘಟನೆ ಹಿಂದೆ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳಿವೆ. ನಿನ್ನೆ ಘಟನೆ ತನಿಖೆ ಆಗುತ್ತಿದೆ. 144 ಅವಶ್ಯಕತೆ ಇರುವ ಕಡೆ ಹಾಕಿದ್ದೇವೆ. ಕಾಂಗ್ರೆಸ್ ನಾಯಕರು ದೇಶದಲ್ಲಿ ಬೆಂಕಿ ಹಚ್ಚಲು ಹೋಗಿ ಕಳೆದು ಹೋಗಿದ್ದಾರೆ. ರಾಜ್ಯದಲ್ಲಿ ವಿಪಕ್ಷ ಸ್ಥಾನ ಮಾತ್ರ ಇದೆ. ಹೀಗೆ ಮಾಡಿದರೆ ಇವರ ಪಕ್ಷವನ್ನು ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ ಎಂದು ಕಿಡಿಕಾರಿದರು.
ನಿನ್ನೆ ಅಹಿತಕರ ಘಟನೆಗಳು, ಕಾನೂನು ಬಾಹಿರ ಕೆಲಸಗಳು ಆಗಿದ್ದರೆ ಕ್ರಮ ಕೈಗೊಳ್ಳುತ್ತೇವೆ. ಇದರ ಬಗ್ಗೆ ಆಯಾ ಪೆÇಲೀಸರಿಗೆ ಸೂಚನೆ ಕೊಡಲಾಗಿದೆ. ಹೊರಗಿನ ಕೆಲವರ ಬಂಧನ ಮಾಡಲಾಗಿದೆ. ಇದುವರೆಗೆ ವಿದ್ಯಾರ್ಥಿಗಳನ್ನು ಯಾರನ್ನೂ ಬಂಧಿಸಿಲ್ಲ. ಇದು ಸರ್ಕಾರದ ವೈಫಲ್ಯ ಅಲ್ಲ. ಇದೆಲ್ಲ ಪ್ರತಿಪಕ್ಷಗಳ ಪಿತೂರಿ. ಇದೆಲ್ಲದರ ಹಿಂದೆ ಪ್ರತಿಪಕ್ಷಗಳಿವೆ ಎಂದು ಇದೇ ವೇಳೆ ಗೃಹ ಸಚಿವರು ಆರೋಪಿಸಿದರು.