ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿಕೆ ಚಿಲ್ಲರೆ ಹೇಳಿಕೆ, ಅತ್ಯಂತ ಕೀಳು ಮಟ್ಟದ ಹೇಳಿಕೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ಮಾಡಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜಮೀರ್ ಒಬ್ಬ ಶಾಸಕನಾಗಿ ಇಂತಹ ಕೀಳು ಮಟ್ಟದ ಹೇಳಿಕೆ ನೀಡಬಾರದು, ಸದನದಲ್ಲಿಂದು ಹಿಜಾಬ್, ಹೈಕೋರ್ಟ ಮಧ್ಯಂತರ ಆದೇಶ ಮತ್ತು ಜಮೀರ್ ಹೇಳಿಕೆ ವಿಚಾರವಾಗಿ ಕಾಂಗ್ರೆಸ್ ತನ್ನ ನಿಲುವು ಸ್ಪಷ್ಟಪಡಿಸಲಿ ಎಂದು ಇದೇ ವೇಳೆ ಸವಾಲು ಹಾಕಿದರು.
ಇನ್ನು ಕಾಂಗ್ರೆಸ್ನ ತುಷ್ಠಿಕರಣ ರಾಜಕೀಯದಿಂದ ಪಾಕಿಸ್ತಾನ ನಿರ್ಮಾಣವಾಗಿದೆ. ಈಗ ಮತ್ತೆ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ದೇಶದ ಮುಸ್ಲಿಂ ಬಾಂಧವರಿಗೆ ನಾನು ಸಲಹೆ ನೀಡುತ್ತೇನೆ ಕಾಂಗ್ರೆಸ್ ನಿಮ್ಮ ಮಕ್ಕಳನ್ನು ಬಳಿಸಿಕೊಳ್ಳುತ್ತಿದೆ. ಹಿಂದಿನಿಂದಲೂ ಇದೇ ರಾಜಕಾರಣ ಮಾಡಿದೆ. ಇದಕ್ಕೆ ನಿಮ್ಮ ಮಕ್ಕಳು ಬಲಿಯಾಗುವುದು ಬೇಡ. ಎಲ್ಲಾ ವರ್ಗಕ್ಕೂ ವಸ್ತ್ರ ಸಂಹಿತೆ ಇರುತ್ತದೆ. ಶಿಕ್ಷಣ ಇಲಾಖೆ, ಪೆÇಲೀಸ್, ಮಿಲಿಟರಿ, ವೈದ್ಯರು ಎಲ್ಲರಿಗೂ ಇರುತ್ತದೆ. ಅದನ್ನು ಎಲ್ಲರೂ ಪಾಲನೆ ಮಾಡಬೇಕು ಎಂದರು.
ಅದೇ ರೀತಿ ಹಿಜಾಬ್ ವಿಚಾರವಾಗಿ ಕಾಂಗ್ರೆಸ್ ಯುವರಾಣಿ ಒಂದು ಶಬ್ದ ಬಳಕೆ ಮಾಡಿದ್ದಾರೆ. ಅವರು ಮಾಡಿದ ಶಬ್ದವನ್ನು ನಾನು ಬಳಸೋದಿಲ್ಲ ಎಂದು ಪ್ರಿಯಾಂಕಾ ಗಾಂಧಿ ವಿರುದ್ಧವೂ ವಾಗ್ದಾಳಿ ಮಾಡಿದ ಪ್ರಹ್ಲಾದ್ ಜೋಶಿ ಹಿಜಾಬ್ ವಿಚಾರದಲ್ಲಿ ಶಾಲೆ, ಕಾಲೇಜುಗಳಲ್ಲಿ ಯಾರೇ ಪ್ರತಿಭಟನೆ ಮಾಡಿದ್ರೂ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.