ಸ್ವಾತಂತ್ರ್ಯ ಹೋರಾಟ ಮಾಡಿದ ಕಿತ್ತೂರು ಚೆನ್ನಮ್ಮ, ಕೆಳದಿ ಚೆನ್ನಮ್ಮ, ಬೆಳವಡಿ ಮಲ್ಲಮ್ಮ, ಒನಕೆ ಓಬವ್ವ ಇವರು ಪುರುಷರನ್ನೂ ಮೀರಿಸುವ ಪೌರುಷ ಹೊಂದಿದ್ದರು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಸ್ಮರಿಸಿಕೊಂಡರು.ಬಸವರಾಜ ಬೊಮ್ಮಾಯಿ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಧಾನಸೌಧ ಮೆಟ್ಟಿಲುಗಳ ಮುಂದೆ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಹಾಗೂ ಕ್ರೈಸ್ತ ವಸತಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಹೆಣ್ಣು ಮಕ್ಕಳಿಗೆ ಆತ್ಮ ರಕ್ಷಣೆಯ ಕಲೆಯನ್ನು ತರಬೇತಿ ನೀಡುವ ಕಾರ್ಯಕ್ರಮ ಓಬವ್ವ ಆತ್ಮ ರಕ್ಷಣಾ ಕಲಾ ಕೌಶಲ್ಯ ತರಬೇತಿ ಚಾಲನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಆತ್ಮ ರಕ್ಷಣೆ ಕಲೆಗಳ ಪ್ರದರ್ಶನ ಮಾಡಿದರು. ಇನ್ನು ಕಾರ್ಯಕ್ರಮ ಉದ್ಘಾಟನೆಗೂ ಮುನ್ನ ಸಿಎಂ ಬೊಮ್ಮಾಯಿ ಮಕ್ಕಳೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಸಿಎಂ ಎದೆ ಎತ್ತರಕ್ಕೆ ವಿದ್ಯಾರ್ಥಿನಿ ಕಾಲು ಬೀಸಿ ತಮ್ಮ ಕೌಶಲ್ಯ ಪ್ರದರ್ಶಿಸಿದಳು. ಆಗ ವಿದ್ಯಾರ್ಥಿನಿಗೆ ಸಿಎಂ ಶಬ್ಬಾಶ್ ಗಿರಿ ಕೊಟ್ಟರು. ತಮ್ಮ ಎದೆ ಎತ್ತರಕ್ಕೆ ಕೈ ಹಿಡಿದು ಕಿಕ್ ಮಾಡುವಂತೆ ವಿದ್ಯಾರ್ಥಿನಿಗೆ ಸೂಚಿಸಿ ವಿದ್ಯಾರ್ಥಿಯ ಸಾಮಥ್ರ್ಯವನ್ನು ಸಿಎಂ ಪರೀಕ್ಷೆ ಮಾಡಿದರು.

ಕಾರ್ಯಕ್ರಮ ಉದ್ಘಾಟನೆ ಬಳಿಕ ಮಾತನಾಡಿ ಸಿಎಂ ಬೊಮ್ಮಾಯಿ ಸ್ವಾತಂತ್ರ್ಯ ಹೋರಾಟ ಮಾಡಿದ ಕಿತ್ತೂರು ಚೆನ್ನಮ್ಮ, ಕೆಳದಿ ಚೆನ್ನಮ್ಮ, ಬೆಳವಡಿ ಮ್ಮಲ್ಲಮ್ಮ, ಒನಕೆ ಓಬವ್ವ, ಇವರು ಪುರುಷರನ್ನೂ ಮೀರಿಸುವ ಪೌರುಷ ಹೊಂದಿದ್ದರು ಎಂದರು. ದೇಶ ಕಟ್ಟುವುದಕ್ಕೆ ಆರ್ಥಿಕ ಅಭಿವೃದ್ಧಿ ಎಷ್ಟು ಮುಖ್ಯವೋ ಸ್ಫೂರ್ತಿ ಕೂಡ ಅμÉ್ಟೀ ಮುಖ್ಯವಾಗಿರುತ್ತೆ. ಒಳ್ಳೆಯ ಇತಿಹಾಸ ಇದ್ದರೆ ದೇಶದ ಭವಿಷ್ಯ ಚೆನ್ನಾಗಿರುತ್ತದೆ. ಕನ್ನಡಿಗರ ಇತಿಹಾಸ ಹೋರಾಟ ಮತ್ತೆ ಮರುಕಳಿಸಿ ವೈಭವೀಕರಿಸಿ ಸ್ಫೂರ್ತಿ ತುಂಬುವ ಕಾಲ ಈಗ ಮತ್ತೆ ಬಂದಿದೆ ಎಂದರು.
7,500 ಹೊಸ ಎನ್ಸಿಸಿ ಕೆಡೆಟ್ಸ್ ತೆಗೆದುಕೊಳ್ಳಲು ಸರ್ಕಾರ ನಿರ್ಧಾರ ಮಾಡಿದೆ. 44 ಸಾವಿರ ಶಾಲೆಗಳಲ್ಲಿ ಎನ್ಸಿಸಿ ಇದೆ. ಓಅಅ ಕೆಡೆಟ್ಗಳ ಕಾರ್ಯಕ್ರಮ ಶೈಲಿ ಬದಲಾಯಿಸಿ. ಹೊಸ ಪರಿವರ್ತನೆಗೆ ರಕ್ಷಣಾ ಮಂತ್ರಿಗಳ ಅನುಮತಿ ಕೇಳಿದ್ದೇವೆ. 50 ಸಾವಿರಕ್ಕೂ ಹೆಚ್ಚು ಕೆಡೆಟ್ಗಳಿಗೆ ರಾಜ್ಯದಿಂದ ಮಿಲಿಟ್ರಿ ಸಮಾನವಾದ ಶಿಕ್ಷಣ ನೀಡುವುದಕ್ಕೆ ತೀರ್ಮಾನ ಮಾಡಿದ್ದೇವೆ ಎಂದು ಇದೇ ವೇಳೆ ಸಿಎಂ ಬೊಮ್ಮಾಯಿ ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಎನ್.ರವಿಕುಮಾರ, ಮುನಿರಾಜುಗೌಡ ಮತ್ತು ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.