ಹಿಜಾಬ್ ವಿಚಾರದಲ್ಲಿ ಕೋರ್ಟ್ ಯಾವುದೇ ತೀರ್ಪು ಕೊಟ್ಟರು ಸರ್ಕಾರ ಮಾನ್ಯತೆ ಮಾಡುತ್ತದೆ. ಇದೇ ರೀತಿಯ ತೀರ್ಪು ಬರುತ್ತದೆ ಎಂದು ಹೇಳಲು ಆಗಲ್ಲ. ಕೋರ್ಟ್ ತೀರ್ಪು ನೋಡಿಕೊಂಡು ಸರ್ಕಾರ ಮುಂದಿನ ತೀರ್ಮಾನ ಮಾಡುತ್ತದೆ. ಯಾವುದೇ ತರಹದ ತೊಂದರೆ ಆಗದಂತೆ ಗೃಹ ಇಲಾಖೆ ಕ್ರಮ ತೆಗೆದುಕೊಂಡಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಖಾಸಗಿ ವಾಹಿನಿ ಜೊತೆಗೆ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಾಜ್ಯದ ಕಾಲೇಜುಗಳ ಸ್ಥಿತಿಗತಿ ಬಗ್ಗೆ ಸಿಎಂ ಬೊಮ್ಮಾಯಿಗೆ ಮಾಹಿತಿ ನೀಡಿದ್ದೇವೆ. ಈಗಿನ ಪರಿಸ್ಥಿತಿ ನೋಡಿದರೆ ಈ ಘಟನೆಗಳ ಹಿಂದೆ ಕಾಣದ ಕೈಗಳು ಇದೆ ಅನ್ನೋ ಅನುಮಾನ ಮೂಡುತ್ತಿದೆ. ಇಷ್ಟು ಹಠವಾಗಿ ಹೆಣ್ಣುಮಕ್ಕಳು ವಿದ್ಯೆಗಿಂತ ಧರ್ಮವೇ ಮುಖ್ಯ ಎಂದು ಕುಳಿತಿದ್ದಾರೆ. ಇದನ್ನು ನೋಡಿದರೆ ದೇಶ ವಿಭಜನೆ ಮಾಡುವ ದುಷ್ಟ ಶಕ್ತಿಗಳ ಕೆಟ್ಟ ಮನಸುಗಳು ಈ ರೀತಿ ಗೊಂದಲ ಸೃಷ್ಟಿ ಮಾಡುತ್ತಿವೆ ಎಂದು ಗಂಭೀರ ಆರೋಪ ಮಾಡಿದರು.
