ಬೆಂಗಳೂರಿನಲ್ಲಿ ದ್ರಾಕ್ಷಿ ಬೆಳೆಗಾರರ ಸಂಘದ ಪದಾಧಿಕಾರಿಗಳ ನೀಯೋಗ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ಸಿಎಂ ಗೆ ಭೇಟಿ ನೀಡಿ ಚರ್ಚಿಸಲಾಯಿತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಬೆಂಗಳೂರಿನಲ್ಲಿ ದ್ರಾಕ್ಷಿ ಬೆಳೆಗಾರರ ಸಂಘದ ಪದಾಧಿಕಾರಿಗಳ ನಿಯೋಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ದ್ರಾಕ್ಷಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.

ಈ ಸಂದರ್ಭದಲ್ಲಿ ದ್ರಾಕ್ಷಿ ಬೆಳಗಾರರ ಸಂಘದ ರಾಜ್ಯಾಧ್ಯಕ್ಷರಾದ ನಾಂದ್ರೇಕರ, ಖ್ಯಾತ ದ್ರಾಕ್ಷಿ ಬೆಳೆಗಾರರಾದ ಎಂ.ಎಸ್.ರುದ್ರಗೌಡ್ರ, ಮುಖಂಡರಾದ ಡಾ.ಬಿ.ಎಸ್.ಪಾಟೀಲ ನಾಗರಾಳಹುಲಿ, ಸಂಜಯ್ ಪಾಟೀಲ ಕನಮಡಿ, ಸಂಗನಗೌಡ ಪಾಟೀಲ ಸೇರಿದಂತೆ ದ್ರಾಕ್ಷಿ ಬೆಳೆಗಾರರ ಸಂಘದ ಪದಾಧಿಕಾರಿಗಳು, ಮುಖಂಡರು, ಉಪಸ್ಥಿತರಿದ್ದರು.