Banglore

ನಾನು ರಾಷ್ಟ್ರಭಕ್ತ: ಲೂಟಿಕೋರ ಡಿಕೆಶಿ ರಾಜೀನಾಮೆ ಕೊಡಲಿ: ಸಚಿವ ಈಶ್ವರಪ್ಪ ಆಗ್ರಹ

Share

ಶ್ರೀನಗರದ ಲಾಲ್‍ಚೌಕ್‍ನಲ್ಲಿ ತಿರಂಗಾ ಧ್ವಜ ಹಾರಿಸಿ ಬಂದ ರಾಷ್ಟ್ರಭಕ್ತ ನಾನು. ಹೀಗಾಗಿ ಯಾರು ರಾಷ್ಟ್ರದ್ರೋಹದ ಕೆಲಸ ಮಾಡಿದ್ದಾರೋ, ರಾಷ್ಟ್ರಧ್ವಜ ಹಿಡಿದುಕೊಂಡು ಧರಣಿ ಮಾಡುವ ಮೂಲಕ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೋ ಅಂತಹ ವ್ಯಕ್ತಿ ಡಿ.ಕೆ.ಶಿವಕುಮಾರ್ ಮೊದಲು ರಾಜೀನಾಮೆ ಕೊಡಲಿ. ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಈಶ್ವರಪ್ಪ ಇಲ್ಲದೇ ಇರುವ ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜ ಇದೆ ಎಂದು ಸುಳ್ಳು ಹೇಳಿ, ಇಡೀ ಕರ್ನಾಟಕ ರಾಜ್ಯದಲ್ಲಿ ಪ್ರಚೋದನೆ ಕೊಟ್ಟು ಅನ್ಯಾಯ ಮಾಡಿ, ರಾಷ್ಟ್ರಧ್ವಜವನ್ನು ದುರುಪಯೋಗ ಪಡಿಸಿಕೊಂಡವರು ಡಿ.ಕೆ.ಶಿವಕುಮಾರ್. ಅದೇ ರೀತಿ ನಿನ್ನೆ ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಸದನದಲ್ಲಿ ರಾಷ್ಟ್ರಧ್ವಜ ಹಿಡಿದು ಧರಣಿ ಕುಳಿತಿದ್ದಾರೆ. ಇದು ರಾಷ್ಟ್ರಧ್ವಜಕ್ಕೆ ಮಾಡಿರುವ ಅಪಮಾನ ಹೀಗಾಗಿ ಡಿ.ಕೆ.ಶಿವಕುಮಾರ್ ರಾಜೀನಾಮೆ ಕೊಡಲಿ, ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದರು.

ರಾಷ್ಟ್ರ ಭಕ್ತ ನಾನು, ತುರ್ತು ಪರಿಸ್ಥಿತಿಯಲ್ಲಿ ಜೈಲಿಗೆ ಹೋಗಿ ಬಂದಿದ್ದೇನೆ. ತಿರಂಗಾ ಯಾತ್ರೆ ಅವರು ಮಾಡಿಲ್ಲ, ತಿರಂಗಾ ಯಾತ್ರೆ ಮಾಡಿದ್ದು ನಾವು. ಕೆಂಪು ಕೋಟೆ ಮೇಲೆ ಎರಡನೂರು, ಮುನ್ನೂರು, ಐದನೂರು ವರ್ಷದ ನಂತರ ಯಾರು ಬೇಕಾದ್ರೂ ಕೇಸರಿ ಧ್ವಜ ಹಾರಿಸಬಹುದು ಎಂದು ಹೇಳಿದ್ದೇನೆ ಹೊರತು ಬೇರೆ ಏನೂ ಹೇಳಿಲ್ಲ. ಆದರೆ ಶ್ರೀನಗರದ ಲಾಲ್‍ಚೌಕ್‍ನಲ್ಲಿ ಉಗ್ರಗಾಮಿಗಳ ಭಯ ಇಲ್ಲದೇ ನರೇಂದ್ರ ಮೋದಿ, ಮುರುಳಿ ಮನೋಹರ ಜೋಶಿ ಅವರ ನೇತೃತ್ವದಲ್ಲಿ ರಾಷ್ಟ್ರಧ್ವಜ ಹಾರಿಸಿ ಬಂದ ರಾಷ್ಟ್ರಭಕ್ತ ನಾನು. ಹೀಗಾಗಿ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡೋದಿಲ್ಲ. ಇವರು ಬೇಲ್ ಮೇಲೆ ಇದ್ದಾರೆ, ಲೂಟಿ ಮಾಡಿದ್ದಾರೆ. ಅಂತಹ ವ್ಯಕ್ತಿ ರಾಜೀನಾಮೆ ಕೊಟ್ಟು ಹೊರಗೆ ಬರಲಿ ಎಂದು ಆಗ್ರಹಿಸಿದರು.

ಒಟ್ಟಿನಲ್ಲಿ ಕಾಂಗ್ರೆಸ್‍ನವರು ಧಾರಾಳವಾಗಿ ಪ್ರತಿಭಟನೆ ಮಾಡಲಿ, ಪ್ರತಿಭಟನೆ ಮಾಡಲು ಎಲ್ಲರಿಗೂ ಪ್ರಜಾಪ್ರಭುತ್ವದಲ್ಲಿ ಸ್ವಾತಂತ್ರ್ಯವಿದೆ. ಅವರು ಎಷ್ಟು ಬೇಕಾದ್ರೂ ಪ್ರತಿಭಟನೆ ಮಾಡಲಿ, ಅದಕ್ಕೆ ಜಗ್ಗಲ್ಲ, ಕುಗ್ಗಲ್ಲ ಎಂದು ಕೈ ನಾಯಕರಿಗೆ ಸಚಿವ ಈಶ್ವರಪ್ಪ ತಿರುಗೇಟು ನೀಡಿದರು.

 

Tags:

error: Content is protected !!