hubbali

ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರ ವಿರುದ್ಧ ದಲಿತ ಹಿತ ಸಭಾ ಪ್ರತಿಭಟನೆ

Share

ಗಣರಾಜ್ಯೋತ್ಸವ ದಿನದಂದು ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿ ಅವಮಾನಿಸಿದ್ದಾರೆ. ರಾಜ್ಯಪಾಲರು ಅವರನ್ನು ಕೂಡಲೇ ವಜಾ ಮಾಡಬೇಕೆಂದು ಒತ್ತಾಯಿಸಿ ದಲಿತ ಹಿತ ಸಭಾ ನಗರದಲ್ಲಿಂದು ಪ್ರತಿಭಟನಾ ನಡೆಸಿತು.

ಇಲ್ಲಿನ ಸ್ಟೇಶನ್ ರಸ್ತೆಯ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ತಹಶಿಲ್ದಾರರ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ದಲಿತ ಹಿತ ಸಭಾದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಜ.26 ರಂದು ರಾಯಚೂರಿನ ನ್ಯಾಯಾಲಯ ಸಂಕೀರ್ಣದಲ್ಲಿ ಜರುಗಿದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರಕಾರದ ಆದೇಶದಂತೆ ಕಾರ್ಯಕ್ರಮದಲ್ಲಿ ಇರಿಸಲಾಗಿದ್ದ ಡಾ.ಬಾಬಾಸಾಹೇಬ ಅಂಬೇಡ್ಕರ್ ಭಾವಚಿತ್ರವನ್ನು ತಗೆಸುವುದರ ಮೂಲಕ ನ್ಯಾಯಾಧೀಶ ಮಲ್ಲಿಕಾರ್ಜುನ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಘೋರ ಅಪಚಾರ ಮಾಡಿದ್ದಾರೆ. ಕೂಡಲೇ ಅವರ ವಿರುದ್ಧ ದೇಶ ದ್ರೋಹದ ಪ್ರಕರಣ ದಾಖಲಿಸಬೇಕು. ಮತ್ತು ಅವರನ್ನು ರಾಜ್ಯಪಾಲರು ಕೂಡಲೇ ಸೇವೆಯಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ತಹಶಿಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಲಕ್ಷ್ಮಣ ಬೀಳಗಿ, ಹನುಮಂತಪ್ಪ ಛಲವಾದಿ, ರಂಗನಾಯಕ ತಪೇಲಾ, ರೇಣುಕಪ್ಪ ಕೇಲೂರ, ರಾಮಚಂದ್ರ ಸುಳ್ಳದ, ಹುಲಗೇಪ್ಪ ಛಲವಾದಿ, ರವಿ ಬಂಕಾಪೂರ, ಕಿಟ್ಟು ಬಿಜವಾಡ, ಪ್ರಕಾಶ ಸಣ್ಣಕಿ, ನಾಗರಾಜ್ ಟಗರಗುಂಟಿ ಸೇರಿದಂತೆ ಮುಂತಾದವರು ಇದ್ದರು.

Tags:

error: Content is protected !!