Belagavi

ನ್ಯಾ. ಮಲ್ಲಿಕಾರ್ಜುನ ಗೌಡ ವಿರುದ್ಧ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ: ಜಿಲ್ಲಾಧಿಕರಿಗಳಿಗೆ ಮನವಿ

Share

ರಾಯಚೂರಿನಲ್ಲಿ ಗಣರಾಜ್ಯೋತ್ಸವದ ವೇಳೆ ಅಂಬೇಡ್ಕರ್ ಭಾವಚಿತ್ರಕ್ಕೆ ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾಜುನ ಗೌಡರಿಂದ ಆದ ಅವಮಾನವನ್ನು ಖಂಡಿಸಿ ಅವರ ಮೇಲೆ ಕಾನೂನು ಕ್ರಮವನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ಬೆಳಗಾವಿಯಲ್ಲಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ರಾಯಚೂರಿನಲ್ಲಿ 73ನೇ ಗಣರಾಜ್ಯೋತ್ಸವದ ವೇಳೆ ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಪೂಜಾ ಸ್ಥಳಿಂದ ಡಾ. ಬಾಬಾಸಾಹೇಬ್ ಅಂಬೇಡ್ಕರ್‍ರ ಭಾವಚಿತ್ರವನ್ನು ತೆಗೆಸಿ ಅವಮಾನ ಮಾಡಿದ್ದಾರೆ. ಹಾಗಾಗಿ 1968ರ ಕಾಯ್ದೆಯಂತೆ ನ್ಯಾನಾಧಿಶರ ವಿಚಾರಣೆ ಕಾಯ್ದೆಯಡಿ ಅವರನ್ನು ವಿಚಾರಣೆ ನಡೆಸಿ ಅವರನ್ನು ನ್ಯಾಯಾಧೀಶರ ಸ್ಥಾನದಿಂದ ಕೆಳಗಿಳಿಸಿ ಅವರ ಮೇಲೆ ಕಾನೂನು ರೀತಿಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಪ್ರತಿಭಟನಾ ಮೆರವಣಿಗೆಯ ಮೂಲಕ ಆಗಮಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಡಿದ ದಲಿತ ಸಂಘರ್ಷ ಸಮಿತಿ ಮುಖಂಡರು, ಗಣರಾಜ್ಯೋತ್ಸವದ ವೇಳೆ ಮಲ್ಲಿಕಾರ್ಜುನ ಗೌಡ ರವರು ಪೂಜಾ ಸ್ಥಳದಿಂದ ಅಂಬೇಡ್ಕರ್‍ರ ಭಾವಚಿತ್ರವನ್ನು ತೆಗೆಸಿ ಅವಮಾನ ಮಾಡಿದ್ದಾರೆ. ನನ್ನ ಅನುಮತಿಯಿಲ್ಲದೇ ನೀವ್ಯಾಕೆ ಅಂಬೇಡ್ಕರ್ ಭಾವಚಿತ್ರ ಇಟ್ಟಿದ್ದೀರಿ. ಅಂಬೇಡ್ಕರ್ ಭಾವಚಿತ್ರ ತೆಗೆದರೆ ಮಾತ್ರ ನಾನು ಧ್ವಜಾರೋಗಣ ಮಾಡುತ್ತೇನೆ ಎಂದು ಹೇಳಿ ಅಂಬೇಡ್ಕರ್‍ರವರಿಗೆ ಅವಮಾನ ಮಾಡಿದ್ದಾರೆ. ಹಾಗಾಗಿ ನ್ಯಾಯಾಧೀಶರ ವಿಚಾರಣೆ ಕಾಯ್ದೆ ಪ್ರಕಾರ ಅವರನ್ನು ವಿಚಾರಣೆಗೆ ಒಳಪಡಿಸಬೇಕು. ಅವರ ಮೇಲೆ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕೆಂದು ಮನವಿ ಮಾಡಿದರು.

ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ವಿರುದ್ಧ ಸಾಕಷ್ಟು ಆಕ್ರೋಶ ಕೇಳಿಬರುತ್ತಿದೆ. ಇನ್ನು ಅವರನ್ನು ನ್ಯಾಯಾಧೀಶರ ಸ್ಥಾನದಿಂದ ಕೆಳಗಿಳಿಸಬೇಕೆಂದು ವಿವಿಧ ಸಂಘಟನೆಗಳು ಒತ್ತಾಯ ಮಾಡುತ್ತಿವೆ. ಇನ್ನು ಈ ಕುರಿತಂತೆ ಸರಕಾರ ಯಾವ ಕ್ರಮ ಕೈಗೊಳ್ಳಲಿದೆ ಎಂದು ಕಾದು ನೋಡಬೇಕಿದೆ.

 

Tags:

error: Content is protected !!