ಫೋಟೋ ಶೂಟ್ಗೆ ಹೋಗಿದ್ದ ವಿದ್ಯಾರ್ಥಿಯೊರ್ವ ಈಜಲು ಹೋಗಿ ಆಯತಪ್ಪಿ ನದಿಯಲ್ಲಿ ಬಿದ್ದ ಪರಿಣಾಮ ಸಾವನ್ನಪ್ಪಿರುವ ಧಾರುಣ ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯದಲ್ಲಿ ನಡೆದಿದೆ.

ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದ ಜಿಹಾದ ಮಸೂದ್ ಶರೀಫ (20) ಮೃತ ಯುವಕ ಎಂದು ಗುರುತಿಸಲಾಗಿದೆ. ಮೃತ ಯುವಕ ನೀಡಸೊಸಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಘಟಪ್ರಭಾ ನದಿಯ ಹಿಡಕಲ್ ಡ್ಯಾಂ ಬಳಿ ಗೆಳೆಯರೊಂದಿಗೆ ಫೆÇೀಟೋಶೂಟ್ ಮಾಡಲು ಹೋಗಿದ್ದ. ಈ ವೇಳೆ ಯುವಕ ನದಿಯಲ್ಲಿ ಈಜಲು ಹೋಗಿ ನದಿಗೆ ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ.

ಸ್ಥಳಕ್ಕೆ ಯಮಕನಮರಡಿ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನದಿಯಿಂದ ಯುವಕನ ಮೃತ ದೇಹ ಹೊರ ತೆಗೆಯಲಾಗಿದೆ. ಮೃತ ಯುವಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮಟ್ಟಿದ್ದು, ಯಮಕನಮರಡಿ ಪೆÇಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.