Bagalkot

ಬಾಗಲಕೋಟೆ ಜಿಲ್ಲೆಯ ಬೆಳಗಲಿ ವಿದ್ಯಾರ್ಥಿ ನೀಟ್ ಪಿಜಿ ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ..!

Share

ಬಾಗಲಕೋಟೆ ಜಿಲ್ಲೆಯ ಮುಧೋಳ ವಿಧಾನಸಭಾ ಕ್ಷೇತ್ರದ ಬೆಳಗಲಿ ಗ್ರಾಮದ ಹೆಮ್ಮೆಯ ವಿದ್ಯಾರ್ಥಿ ಡಾ.ಚಿದಾನಂದ ಕುಂಬಾರ ಬೆಳಗಲಿ ನೀಟ್ ಪಿ.ಜಿ ಪರೀಕ್ಷೆಯಲ್ಲಿ ರಾಷ್ಟ್ರಕ್ಕೆ ಪ್ರಥಮ ಸ್ಥಾನ ಗಳಿಸುವ ಮೂಲಕ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.

ಬೆಳಗಲಿ ಗ್ರಾಮದ ಹೆಮ್ಮೆಯ ವಿದ್ಯಾರ್ಥಿ ಡಾ.ಚಿದಾನಂದ ಕುಂಬಾರ ಬೆಳಗಲಿ ನೀಟ್ ಪಿ.ಜಿ ಪರೀಕ್ಷೆಯಲ್ಲಿ ಅತೀ ಹೆಚ್ಚು 759 ಅಂಕಗಳನ್ನು ಗಳಿಸುವ ಮೂಲಕ ರಾಷ್ಟ್ರಕ್ಕೆ ಪ್ರಥಮ ಸ್ಥಾನ ಗಳಿಸಿ, ಕರ್ನಾಟಕದ ಕೀರ್ತಿ ಪತಾಕೆಯನ್ನು ಸಹ್ಯಾದ್ರಿಯ ಎತ್ತರಕ್ಕೆ ಏರಿಸಿದ್ದಾರೆ. ಈ ಸಂದರ್ಭದಲ್ಲಿ ಮುಧೋಳ ಶಾಸಕರು ಹಾಗೂ ಮಾನ್ಯ ಜಲಸಂಪನ್ಮೂಲ ಸಚಿವರಾದ ಶ್ರೀ ಗೋವಿಂದ ಕಾರಜೋಳ ತುಂಬು ಹೃದಯದಿಂದ ಈ ವಿದ್ಯಾರ್ಥಿಯ ಸಾಧನೆಯನ್ನು ಮೆಚ್ಚಿ ಅಭಿನಂದಿಸಿದ್ದಾರೆ. ಇಂದು ಮುಂಜಾನೆ ಮಾನ್ಯ ಸಚಿವರು ಡಾ.ಚಿದಾನಂದ ಕುಂಬಾರ ಬೆಳಗಲಿ ರವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಸಂತೋಷವನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಬೆಳಗಲಿರವರು ತಮ್ಮ ಎಂ.ಬಿ.ಬಿ.ಎಸ್ ಅಧ್ಯಯನದ ಸಂದರ್ಭದಲ್ಲಿ ಮಾನ್ಯ ಸಚಿವರಾದ ಗೋವಿಂದ ಕಾರಜೋಳ ರವರು ಮಾಡಿದ ಸಹಾಯ ಮತ್ತು ನೀಡಿದ ನೆರವನ್ನು ಸ್ಮರಿಸಿದರು. ಡಾ.ಚಿದಾನಂದ ಕುಂಬಾರ ಬೆಳಗಲಿ ರವರು ಮುಂದೆ ಗ್ಯಾಸ್ಟ್ರೋ ಎಂಟರೋಲಜಿ ಆಯ್ದುಕೊಳ್ಳುವುದಾಗಿ ತಿಳಿಸಿದರು.

Tags:

error: Content is protected !!