Belagavi

ಬೆಳಗಾವಿ ಉದ್ಯಮಿ ಕಿಡ್ನಾಪ್ ಕೇಸ್: ಬಿಟ್ ಕಾಯಿನ್ ದಂಧೆ ಲಿಂಕ್ ಶಂಕೆ..!

Share

ಬೆಳಗಾವಿ ಜಿಲ್ಲೆಯಲ್ಲಿ ನಡೆದ ಉದ್ಯಮಿ ಕಿಡ್ನಾಪ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಕಿಡ್ನಾಪ್ ಪ್ರಕರಣಕ್ಕೂ, ಬಿಟ್ ಕಾಯಿನ್ ದಂಧೆಗೂ ಸಂಬಂಧವಿದೆಯಾ ಎಂಬ ಶಂಕೆ ವ್ಯಕ್ತವಾಗಿದ್ದು, ಇನ್ನು ಕಿಡ್ನಾಪ್ ಆಗಿದ್ದ ಉದ್ಯಮಿ ರವಿಕಿರಣ್ ಭಟ್ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ಮಹಾರಾಷ್ಟ್ರದ ಸಾಂಗ್ಲಿಯ ಖಾಸಗಿ ಬ್ಯಾಂಕ್‍ನ ಮಾಜಿ ಮ್ಯಾನೇಜರ್ ಆರೋಪಿಸಿ, ಎರಡು ಕೋಟಿ ರೂಪಾಯಿ ಪಡೆದು ವಂಚನೆ ಮಾಡಿದ್ದಾರೆ ಎಂಬ ವಿಡಿಯೋ ಹೇಳಿಕೆ ರಿಲೀಸ್ ಮಾಡಿದ್ದಾರೆ.

ಹೌದು ಉದ್ಯಮಿ ರವಿಕಿರಣ್ ಭಟ್ ಬಿಟ್ ಕಾಯಿನ್ ದಂಧೆಯಲ್ಲಿ ಹಣ ಹೋಡಿಕೆ ಮಾಡಿ ಡಬಲ್ ಮಾಡಿಕೊಡುತ್ತೇನೆ ಎಂದು ವಂಚಿಸಿರುವ ಆರೋಪ ಕೂಡ ಕೇಳಿ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಸಾಂಗ್ಲಿಯ ಕರಮಾಳಾ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೇ ಕಿಡ್ನಾಪ್ ಮಾಡಿದ್ದ ಪ್ರಮುಖ ಆರೋಪಿಗಳು ಸಾಂಗ್ಲಿ ಮೂಲದವರು. ಆದರೆ ಘಟನೆ ನಡೆದು ಹದಿನೈದು ದಿನ ಕಳೆದರೂ ಆರೋಪಿಗಳ ಸುಳಿವು ಮಾತ್ರ ಇನ್ನು ಪತ್ತೆಯಾಗಿಲ್ಲ.

ಆರೋಪಿಗಳು ಬೆಳಗಾವಿ ಕೆಎಲ್‍ಇ ಆಸ್ಪತ್ರೆ ಬಳಿ ಕಾರನ್ನು ತಡೆದಿದ್ದಾರೆ. ಬೈಕ್‍ಗೆ ಕಾರು ಟಚ್ ಮಾಡಿ ಎಸ್ಕೇಪ್ ಆಗುತ್ತಿದ್ದೀಯ ಅಂತಾ ನಾಲ್ವರು ವಾಗ್ವಾದ ಮಾಡಿದ್ದಾರೆ. ರವಿಕಿರಣ್ ಜತೆ ಜಗಳವಾಡಿ ಮೂವರು ಕಾರಿನಲ್ಲಿ ಹತ್ತಿದ್ದರು. ಬಳಿಕ ಹಿಂಬದಿಯಿಂದ ರಿವಾಲ್ವರ್ ತೋರಿಸಿ ನಾವು ಹೇಳಿದ ಕಡೆ ಕಾರು ಚಾಲನೆ ಮಾಡುವಂತೆ ಬೆದರಿಕೆ ಹಾಕಿದ್ದಾರೆ. ಅಲ್ಲಿಂದ ನೇರವಾಗಿ ಖಾನಾಪುರ ಬಳಿ ಕೋಳಿ ಫಾರ್ಮ್‍ಗೆ ಕರೆದೊಯ್ದಿದ್ದಾರೆ.
ಆರೋಪಿಗಳು ರವಿಕಿರಣ್ ಭಟ್‍ನನ್ನು ಕುರ್ಚಿ ಮೇಲೆ ಕೂರಿಸಿ ಕೈ, ಕಾಲು ಕಟ್ಟಿ ಹೊಡೆದು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮೊದಲು 20 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಬಳಿಕ ಆತನ ಬಳಿ ಇದ್ದ 55 ಸಾವಿರ ನಗದು, ಆಪಲ್ ವಾಚ್, ಮೊಬೈಲ್, ಚಿನ್ನ ಹಾಗೂ ಬೆಳ್ಳಿಯ ನಾಣ್ಯ, 75 ಸಾವಿರ ಮೌಲ್ಯದ ಯುಎಸ್ ಕರೆನ್ಸಿ ಕಿತ್ತುಕೊಂಡಿದ್ದರು. ಬಳಿಕ ರವಿಕಿರಣ್ ಮೊಬೈಲ್‍ನಿಂದ ಪತ್ನಿಗೆ ಕರೆ ಮಾಡಿ 3 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದರು.

ಇನ್ನು ಸಾಂಗ್ಲಿಯ ಶಹನವಾಜ್ ಚಮನಶೇಖ್, ಅಜ್ಜು ಚಮನಶೇಖ್, ಅಭಿμÉೀಕ ಶೆಟ್ಟಿ ಹಾಗೂ ಬೆಳಗಾವಿಯ ಯೂನೂಸ್ ಖಾಜಿಗಾಗಿ ಪೊಲೀಸರ ಶೋಧ ಕಾರ್ಯ ಮುಂದುವರಿದಿದೆ. ಪ್ರಕರಣದ ಪ್ರಮುಖ ಆರೋಪಿ ಶಹನವಾಜ್ ಹಾಗೂ ಉದ್ಯಮಿ ರವಿಕಿರಣ್ ಭಟ್ ಇಬ್ಬರೂ ಪರಿಚಯಸ್ಥರು. ರವಿಕಿರಣ್‍ಗೆ ರಾಜ್ಯದಲ್ಲಿ ಪ್ರಭಾವಿ ನಾಯಕರ ಸಂಪರ್ಕ ಇರುವ ಹಿನ್ನೆಲೆ ಪೆÇಲೀಸರು ರವಿಕಿರಣ್ ಭಟ್ ವಿಚಾರಣೆ ಮಾಡಿಲ್ಲ ಎನ್ನಲಾಗುತ್ತಿದೆ. ಸದ್ಯ ಉದ್ಯಮಿ ರವಿಕಿರಣ್ ಭಟ್ ಅಪಹರಣ ಪ್ರಕರಣ ಸುತ್ತ ಹಲವು ಅನುಮಾನಗಳ ಹುತ್ತ ಬೆಳೆದುಕೊಂಡಿದೆ.

 

Tags:

error: Content is protected !!