Belagavi

ವಿಜಯಾ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಮತ್ತೆ ಭುಗಿಲೆದ್ದ ಹಿಜಾಬ್ ವಿವಾದ: ಸ್ಥಳಕ್ಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಭೇಟಿ

Share

ವಿಜಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಿನ್ನೆ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ವಿದ್ಯಾರ್ಥಿನಿಯರು ಪಟ್ಟು ಹಿಡಿದು ದೊಡ್ಡ ವಿವಾದವೇ ಸೃಷ್ಟಿಯಾಗಿತ್ತು. ಇಂದು ಮುಂಜಾನೆ ಕಾಲೇಜು ತರಗತಿ ಪ್ರಾರಂಭವಾಗುತ್ತಿದ್ದಂತೆ ಮತ್ತೆ ಹಿಜಾಬ್ ವಿಚಾರಕ್ಕೆ ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.

ಬೆಳಗಾವಿ ಸದಾಶಿವ ನಗರದಲ್ಲಿರುವ ವಿಜಯಾ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜಿನಲ್ಲಿ ನಿನ್ನೆ ಹಿಜಾಬ್ ಗೆ ಅವಕಾಶ ಕೋರಿ ವಿದ್ಯಾರ್ಥಿಗಳು ಕಾಲೇಜು ಆಡಳಿತ ಮಂಡಳಿ ಹಾಗೂ ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಘಟನೆ ರಾಜ್ಯಾದ್ಯಂತ ಸಂಚಲನಕ್ಕೆ ಕಾರಣವಾಗಿತ್ತು. ಇನ್ನು ಇವತ್ತೂ ಪ್ರತಿಭಟನೆ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕಾಲೇಜು ಸುತ್ತಲೂ ಬಿಗಿ ಪೆÇಲೀಸ್ ಬಂದೋಬಸ್ತ್ ಮಾಡಲಾಗುತ್ತು. ಎಪಿಎಂಸಿ ಪೆÇಲೀಸ್ ಠಾಣೆ ಪಿಎಸ್ಐ ನೇತೃತ್ವದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು. ಕಾಲೇಜು ಸಮಯವಾಗುತ್ತಿದ್ದಂತೆ ಹಿಜಾಬ್, ಬುರ್ಖಾ ಧರಿಸಿ ಕೆಲ ವಿದ್ಯಾರ್ಥಿಗಳು ಆಗಮಿಸುತ್ತಿದ್ದರು. ಈ ವೇಳೆ ಪ್ರತ್ಯೇಕ ಕೊಠಡಿಯಲ್ಲಿ ಹಿಜಾಬ್ ತಗೆದಿಟ್ಟು ವಿದ್ಯಾರ್ಥಿನಿಯರು ಕ್ಲಾಸ್‍ಗೆ ನಡೆದರು.

ಈ ವೇಳೆ ಕಾಲೇಜಿಗೆ 12 ಜನ ವಿದ್ಯಾರ್ಥಿಗಳು ಹಿಜಾಬ್, ಬುರ್ಖಾ ಧರಿಸಿ ಕಾಲೇಜಿಗೆ ಆಗಮಿಸಿದ್ದರು. ಕಾಲೇಜು ಸಿಬ್ಬಂದಿ ಹಿಜಾಬ್ ತೆಗೆಯುವಂತೆ ತಿಳಿಸುತ್ತಿದರು. ಯಾವುದೇ ಕಾರಣಕ್ಕೆ ಹಿಜಾಬ್ ತೆಗೆಯಲ್ಲ ಅಂತಾ ವಿದ್ಯಾರ್ಥಿನಿಯರು ಪಟ್ಟು ಹಿಡಿದರು. ಹಿಜಾಬ್ ತೆಗೆಯುವುದಿಲ್ಲ ಎಂದು ಕೆಲಕಾಲ ಸಿಬ್ಬಂದಿಯೊಂದಿಗೆ ಗಲಾಟೆ ನಡೆಸಿದರು. ಇನ್ನು ಘಟನೆಯನ್ನ ಅವಲೋಕಿಸಿದ ಕಾಲೇಜಿನ ಪ್ರಿನ್ಸಿಪಾಲ ಡಾ.ಪ್ರಕಾಶ ಪಾಟೀಲ್ ವಿದ್ಯಾರ್ಥಿಗಳನ್ನ ಪ್ರತ್ಯೇಕ ಕೊಠಡಿಗೆ ಕರೆಸಿ ಮನವೊಲಿಸಲು ಪ್ರಯತ್ನಿಸಿದರು. ಹೈಕೋರ್ಟ್ ಆದೇಶ ಪಾಲಿಸುವಂತೆ ಕಾಲೇಜು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಮನವಿ ಮಾಡಿದರು.

ಇನ್ನು ವಿಷಯ ತಿಳಿಯುತ್ತಿದ್ದಂತೆ ಕಾಲೇಜಿಗೆ ಆಗಮಿಸಿದ ಜಿಲ್ಲಾಧಿಕಾರಿಗಳಾದ ಎಂ.ಜಿ.ಹಿರೇಮಠ, ಡಿಸಿಪಿ ರವೀಂದ್ರ ಗಡಾದಿ ಅವರಿಂದ ಮಾಹಿತಿ ಪಡೆದರು. ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ವಿದ್ಯಾರ್ಥಿಗಳನ್ನು ಮನವೊಲಿಸಲು ಪ್ರಯತ್ನ ಮಾಡಿದರು.

ವಿದ್ಯಾರ್ಥಿಗಳು ಹಾಗೂ ಶಿಕ್ಷಕರೊಂದಿಗೆ ಚರ್ಚೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು, ಹೈಕೋರ್ಟ್ ಆದೇಶದ ಕುರಿತು ವಿದ್ಯಾರ್ಥಿಗಳಗೆ ಮನವರಿಕೆ ಮಾಡಿದ್ದೇವೆ. ಗೇಟ್ ನಲ್ಲಿ ವಿದ್ಯಾರ್ಥಿಗಳನ್ನ ತಪಾಸಣೆ ಮಾಡದಂತೆ ಕಾಲೇಜು ಸಿಬ್ಬಂದಿಗೆ ಸೂಚನೆ ನೀಡಿದ್ದೇವೆ. ಹಿಜಾಬನ್ನು ಧರಿಸಿದ್ದ 12 ಮಕ್ಕಳಿಗೆ ತಿಳಿ ಹೇಳುವ ಕೆಲಸ ಮಾಡಿದ್ದೇನೆ. ಅವರಿಗೆ ತರಗತಿಗೆ ಕುಳಿತುಕೊಳ್ಳಿ, ಪೆÇೀಷಕರ ಜತೆಗೆ ನಾವು ಮಾತನಾಡುತ್ತೇವೆ ಅಂತಾ ಹೇಳಿದ್ದೇವೆ. ವಿದ್ಯಾರ್ಥಿಗಳ ಪೆÇೀಷಕರನ್ನ ಕಚೇರಿಗೆ ಕರೆಯಿಸಿಕೊಂಡು ಮನವೊಲಿಸುವ ಕಾರ್ಯ ಮಾಡುತ್ತೇವೆ. ಪೆÇೀಷಕರು ನಂಬರ್ ತೆಗೆದುಕೊಂಡು ಕರೆಯಿಸಿಕೊಳ್ಳುತ್ತೇವೆ. ವಿದ್ಯಾರ್ಥಿಗಳಿಗೆ ತರಗತಿ ಪ್ರಾರಂಭ ಆಗುತ್ತೆ ಎಲ್ಲಿ ಹೋಗಬೇಡಿ ಅಂತಾ ಪ್ರಾಂಶುಪಾಲರು ಹೇಳಿದ್ದಾರೆ. ವಿದ್ಯಾರ್ಥಿಗಳು ಹಿಜಾಬ್ ತೆಗೆಯಲು ಚರ್ಚೆ ಮಾಡಿ ಅಂತಾ ಹೇಳಿದ್ದೇನೆ. ಎಲ್ಲರೂ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಅಂತಾ ಹೇಳಿದ್ದಾರೆ ಎಂದರು.

ಇನ್ನು ಗೋಕಾಕ್‍ನಲ್ಲಿ ಹಿಜಾಬ್ ತೆಗೆಯುವ ವಿಚಾರಕ್ಕೆ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಕುರಿತಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಗೋಕಾಕ್ ನಲ್ಲಿ ಕಾಲೇಜು ಹೊರಗೆ ಕುಳಿತು ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ವಿದ್ಯಾರ್ಥಿಗಳನ್ನ ಕಾಲೇಜು ಒಳಗೆ ಕರೆದುಕೊಂಡು ಹೋಗುವಂತೆ ಗೋಕಾಕ್ ತಹಶಿಲ್ದಾರಗೆ ಸೂಚನೆ ನೀಡಿದ್ದೇನೆ. ಹೈಕೋರ್ಟ್ ಆದೇಶ ಪಾಲಿಸುವಂತೆ ತಿಳಿ ಹೇಳಿದ್ದೇವೆ ಎಂದರು.

Tags:

error: Content is protected !!