ಕರ್ನಾಟಕ ರಾಜ್ಯ ಕಾಯಕ ಸಮಾಜಗಳ ಒಕ್ಕೂಟದ ವ್ಯಾಪ್ತಿಯಲ್ಲಿ ೧೦೨ ಜನಾಂಗಗಳು ಒಳಪಡುತ್ತವೆ. ಇದರ ಸಮಾಜಗಳಲ ಅಭಿವೃದ್ಧಿಗಾಗಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಒತ್ತಾಯಿಸುತ್ತೇವೆ ಎಂದು ವಿ.ಪ ಮಾಜಿ ಸದಸ್ಯ ಹಾಗೂ ಒಕ್ಕೂಟದ ರಾಜ್ಯಾಧ್ಯಕ್ಷ ಕೆ.ಸಿ.ಪಟ್ಟಣಶೆಟ್ಟಿ ಹೇಳಿದರು.

ಹುಬ್ಬಳ್ಳಿ ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಒಕ್ಕೂಟದಲ್ಲಿ ೧೦೨ ಜನಾಂಗಗಳನ್ನು ಒಳಗೊಂಡಿದೆ. ಆದರೆ ಮುಂದುವರಿದ ಪಂಚಮಸಾಲಿ ಸಮುದಾಯವನ್ನು ೨-ಎ ಗೆ ಸೇರಿಸಬಾರದು. ಸ್ಥಳೀಯ ಸಂಸ್ಥೆಗಳಿಗೆ ಹಿಂದುಳಿದ ವರ್ಗಗಳಿಗೆ ಈಗಿರುವ ಶೇ ೨೮ ರಷ್ಟು ಮೀಸಲಾತಿ ಕಾಯ್ದಿರಸಬೇಕು, ಕಾಯಕ ಸಮಾಜಗಳ ಅಭಿವೃದ್ಧಿಗೆ ಪ್ರಾಧಿಕಾರ ರಚಿಸಿ ಪ್ರಸಕ್ತ ಬಜೆಟನಲ್ಲಿ ಕನಿಷ್ಠ ೧೦೦೦ ಕೋಟಿ ಅನುದಾನ ನೀಡಬೇಕು. ಪ್ರತಿ ತಾಲೂಕು ಮತ್ತು ಜಿಲ್ಲೆಗಳು ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ತೆರಯಬೇಕು. ಉತ್ತರ ಕರ್ನಾಟಕದಲ್ಲಿ ನೀಡುತ್ತಿರುವ ಮೀಸಲಾತಿ ಸೌಲಭ್ಯಗಳಲ್ಲಿನ. ತಾರತಮ್ಯ ಸರಿಪಡಿಸಬೇಕು. ಗುಡಿ ಕೈಗಾರಿಕೆಗಳ ಅಭಿವೃದ್ಧಿಗೆ ಉಚಿತ ಭೂಮಿ ನೀರು, ವಿದ್ಯುಚ್ಛಕ್ತಿ ಮತ್ತು ಶೇ ೯೦% ರಷ್ಟು ಸಬ್ಸಿಡಿ ದರದಲ್ಲಿ ಬಡ್ಡಿ ರಹಿತ ಸಾಲ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಪ್ರಧಾನ. ಕಾರ್ಯದರ್ಶಿ ಬೋರಪ್ಪಶೆಟ್ಟಿ, ಶಿವಪುತ್ರಪ್ಪ ಇಟಗಿ, ಕೆ.ಆರ್.ಬಾರಕೇರ,, ಎಂ..ಪಿ. ಕುಂಬಾರ್ ಸೇರಿದಂತೆ ಉಪಸ್ಥಿತರಿದ್ದರು.