State

ಶಿಕ್ಷಕರಿಗೂ ಸಮವಸ್ತ್ರ ಕಡ್ಡಾಯ ಮಾಡುವ ಬಗ್ಗೆ ಪರಿಶೀಲನೆ ಮಾಡ್ತಿದ್ದೇವೆ: ಸಚಿವ ಆರಗ ಜ್ಞಾನೇಂದ್ರ

Share

ಶಿಕ್ಷಕರಿಗೂ ಸಮವಸ್ತ್ರ ಕಡ್ಡಾಯ ಮಾಡುವ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.

ಮಂಗಳವಾರ ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಸಚಿವ ಆರಗ ಜ್ಞಾನೇಂದ್ರ ನ್ಯಾಯಾಲಯದ ಆದೇಶ ಪಾಲನೆ ಮಾಡುವುದು ಸರ್ಕಾರದ ಕರ್ತವ್ಯ ಮತ್ತು ಬದ್ಧತೆ. ಶಿಕ್ಷಕರಿಗೂ ಸಮವಸ್ತ್ರ ಕಡ್ಡಾಯ ಮಾಡುವ ಬಗ್ಗೆ, ಸಮಸ್ಯೆ ಆದ ಬಗ್ಗೆ ನಮ್ಮ ಗಮನಕ್ಕೆ ಬಂದಿದೆ. ಅದನ್ನು ನಾವು ಪರಿಶೀಲನೆ ಮಾಡ್ತಿದ್ದೇವೆ ಎಂದರು.

ಇನ್ನು ಹಿಜಾಬ್ ವಿವಾದದ ಬಗ್ಗೆ ಸದನದಲ್ಲಿ ಉತ್ತರ ಕೊಡಲಾಗುವುದು. ನಮಗೂ ಸಮವಸ್ತ್ರ ಪಾಲನೆ ವಿಚಾರದಲ್ಲಿ ಸ್ಪಷ್ಟತೆ ತರುವ ಸದುದ್ದೇಶ ಇದೆ. ಇವತ್ತು ಸದನದಲ್ಲಿ ಈ ವಿಚಾರ ಪ್ರಸ್ತಾಪ ಆಯ್ತು. ಅಗತ್ಯವಿರುವಷ್ಟು ಉತ್ತರ ಕೊಡಲಾಗಿದೆ. ಇನ್ನೂ ಹೆಚ್ಚಿನ ಉತ್ತರ ನಾವು ಕೊಡಲು ಶಕ್ತವಾಗಿದ್ದೇವೆ. ಕೋರ್ಟ್ ಆದೇಶ ಪಾಲನೆ ಮಾಡುವುದು ನಮ್ಮ ಜವಾಬ್ದಾರಿ. ಅದರ ಅರಿವು ನಮಗಿದೆ. ಎಲ್ಲರೂ ಕೋರ್ಟ ಆದೇಶಕ್ಕೆ ಬದ್ಧ ಆಗಿರಬೇಕು ಎಂದರು.

 

Tags:

error: Content is protected !!