ಶೈಕ್ಷಣಿಕ ಕೇಂದ್ರಗಳಲ್ಲಿ ಅಶಾಂತಿ ವಾತಾವರಣಕ್ಕೆ ಕಾರಣ ಆಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಶಾಲಾ ಕಾಲೇಜುಗಳು ರಾಷ್ಟ್ರದ ಭಾವೈಕ್ಯತೆಯ ಕೇಂದ್ರ ಬಿಂದುಗಳು. ರಾಷ್ಟ್ರದ ಆಸ್ತಿಯಾಗಬೇಕಾದ ವಿದ್ಯಾರ್ಥಿಗಳು ಮತೀಯ ಶಕ್ತಿಗಳ ಕೈಯಲ್ಲಿ ಸಾಮಾಜಿಕ ಸ್ವಾಸ್ಥ್ಯವನ್ನು ಕೆಡಿಸುವ ಅಸ್ತ್ರಗಳಾಗದಂತೆ ಪೆÇೀಷಕರು ಎಚ್ಚರ ವಹಿಸಬೇಕು. ಶೈಕ್ಷಣಿಕ ಕೇಂದ್ರಗಳು, ವಿದ್ಯೆ ಕಲಿಯುವ ಹಾಗೂ ಬೋಧನೆಯ ದೇಗುಲಗಳಾಗಿಯೇ ಉಳಿಯಬೇಕು ಕಿವಿಮಾತು ಹೇಳಿದರು.

ಭವಿಷ್ಯದ ದೃಷ್ಟಿಯಿಂದ ವಿದ್ಯಾರ್ಥಿಗಳು ಯೋಚಿಸಬೇಕು. ಕಳೆದ 2 ವರ್ಷಗಳಿಂದ ಕೊರೊನಾದಿಂದ ಶೈಕ್ಷಣಿಕ ಅವಧಿ ಹಾಳಾಗಿದೆ. ಆದರೆ ಈ ಬಾರಿ ಬಹಳ ಚೆನ್ನಾಗಿ ತರಗತಿಗಳು ಆರಂಭವಾಗಿದೆ. ಇದರ ಸದುಪಯಯೋಗವನ್ನು ಪಡೆದುಕೊಳ್ಳಬೇಕು. ಸಮವಸ್ತ್ರ ಎಂದರೆ ನಮ್ಮ ಸಮಾನತೆಯ ಸಂಕೇತವಾಗಿದೆ. ಧರ್ಮವನ್ನು ಆಚರಿಸುವುದು ವೇಷ ಭೂಷಣವನ್ನು ಪ್ರದರ್ಶಿಸಲು ಅಲ್ಲ. ಪಾಲಕರು ಮಕ್ಕಳಿಗೆ ಬುದ್ಧಿ ಹೇಳಿ ಶಾಂತಿಯುತವಾಗಿ ಕಾಲೇಜು ನಡೆಯುವ ಹಾಗೇ ಸಹಕರಿಸಬೇಕು ಎಂದು ಗೃಹ ಸಚಿವರು ಮನವಿ ಮಾಡಿಕೊಂಡರು.