DEATH

ಸಕಲ ಸರ್ಕಾರಿ ಗೌರವಗಳೊಂದಿಗೆ ನಾಡೋಜ ಚೆನ್ನವೀರ ಕಣವಿ ಅಂತ್ಯಕ್ರಿಯೆ

Share

ಅನಾರೋಗ್ಯದಿಂದ ನಿಧನರಾಗಿದ್ದ ಚೆಂಬೆಳಕಿನ ಕವಿ, ನಾಡೋಜ ಚೆನ್ನವೀರ ಕಣವಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಹೌದು ಹೌದು ಅನಾರೋಗ್ಯದಿಂದ ಧಾರವಾಡದ ಎಸ್‍ಡಿಎಂ ಆಸ್ಪತ್ರೆಗೆ ದಾಖಲಾಗಿದ್ದ ಕನ್ನಡದ ಹಿರಿಯ ಕವಿ, ನಾಡೋಜ ಚೆನ್ನವೀರ ಕಣವಿ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದರು. ಬಳಿಕ ಧಾರವಾಡದ ಕೆಸಿಡಿ ಆಸ್ಪತ್ರೆಯಲ್ಲಿ ಚೆನ್ನವೀರ ಕಣವಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಈ ವೇಳೆ ಹಲವು ಗಣ್ಯರು, ಅಭಿಮಾನಿಗಳು ಆಗಮಿಸಿ ಹಿರಿಯ ಕವಿಯ ಅಂತಿಮ ದರ್ಶನ ಪಡೆದುಕೊಂಡರು.

ಇದಾದ ಬಳಿಕ ಧಾರವಾಡ ಹೊರವಲಯದಲ್ಲಿರುವ ಕಣವಿ ಕುಟುಂಬದ ಸೃಷ್ಟಿ ಫಾರ್ಮ್ ಹೌಸ್‍ನಲ್ಲಿ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ಅವರ ಹಿರಿಯ ಪುತ್ರ ಶಿವಾನಂದ ಕಣವಿ ಅವರು ಅಂತಿಮ ವಿಧಿ-ವಿಧಾನಗಳನ್ನು ಕೈಗೊಂಡರು. ಕಣವಿ ಅವರ ಇಚ್ಛೆಯಂತೆ ಪತ್ನಿ ಶಾಂತಾದೇವಿ ಅವರ ಸಮಾಧಿ ಬಳಿಯೇ ಅವರ ಅಂತ್ಯ ಕ್ರಿಯೆ ನಡೆಸಲಾಯಿತು. ಲಿಂಗಾಯತ ಧರ್ಮದ ಪ್ರಕಾರ ಅಂತ್ಯಕ್ರಿಯೆ ನಡೆಯಿತು. ಸರ್ಕಾರದ ಸಕಲ ಗೌರವದೊಂದಿಗೆ ಅವರ ಅಂತ್ಯಸಂಸ್ಕಾರ ನಡೆದಿದ್ದು, ಪೆÇಲೀಸರು ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಗೌರವ ವಂದನೆ ಸಲ್ಲಿಸಿದರು.

ಅಂತ್ಯಸಂಸ್ಕಾರ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ಶಾಸಕ ಅರವಿಂದ ಬೆಲ್ಲದ ಮಾತ್ರವಲ್ಲದೆ ಅನೇಕ ಸಾಹಿತಿಗಳು, ಜನಪ್ರತಿನಿಧಿಗಳು, ಮಠಾಧೀಶರು ಪಾಲ್ಗೊಂಡು ಅಂತಿಮ ದರ್ಶನವನ್ನು ಪಡೆದರು.

Tags:

error: Content is protected !!