Uncategorized

ಸಾವಿನಲ್ಲಿಯೂ ಸಾರ್ಥಕತೆ: ಬೆಳಗಾವಿಯ ಲೀಲಾದೇವಿ ಹುಂಬರವಾಡಿ ದೇಹದಾನ

Share

ಬೆಳಗಾವಿ ಆದರ್ಶ ನಗರ ವಡಗಾವಿ ನಿವಾಸಿ ಲೀಲಾದೇವಿ ಚಂದ್ರಶೇಖರ ಹುಂಬರವಾಡಿ (79) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇವರು ಸಾವಿನಲ್ಲಿಯೂ ತಮ್ಮ ದೇಹ ದಾನ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ಅವರ ಅಂತಿಮ ಇಚ್ಛೆಯಂತೆ ಬೈಲಹೊಂಗಲದ ಡಾ.ರಾಮಣ್ಣವರ ಚಾರಿಟೆಬಲ್ ಟ್ರಸ್ಟ್ ಮುಖಾಂತರ ಅವರ ದೇಹವನ್ನು ಬೆಳಗಾವಿಯ ಕೆ.ಎಲ್.ಇ. ವಿಶ್ವವಿದ್ಯಾಲಯದ ಜವಾಹರ್ ಲಾಲ್ ನೆಹರೂ ವೈದ್ಯಕೀಯ ಮಹಾವಿದ್ಯಾಲಯಕ್ಕೆ ವೈದ್ಯಕೀಯ ವಿದ್ಯಾರ್ಥಿಗಳಿಗೆ ದಾನವಾಗಿ ನೀಡಿದ್ದಾರೆ. ಪ್ರಾಂಶುಪಾಲ ಡಾ.ಎನ್.ಎಸ್. ಮಹಾಂತಶೆಟ್ಟಿ ಹಾಗೂ ಶರೀರರಚನಾ ವಿಭಾಗದ ಮುಖ್ಯಸ್ಥ ಡಾ.ಶಿಲ್ಪಾ ಶರೀರ ರಚನಾ ವಿಭಾಗಕ್ಕೆ ಗೌರವಪೂರ್ವಕವಾಗಿ ದೇಹವನ್ನು ಸ್ವೀಕರಿಸಿ ಹುಂಬರವಾಡಿ ಕುಟುಂಬದವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಮೃತರಿಗೆ ಪತಿ, ಇಬ್ಬರು ಪುತ್ರರು, ಓರ್ವಪುತ್ರಿ ಅಗಲಿದ್ದಾರೆ. ಇವರು ಕೆನರಾ ಬ್ಯಾಂಕ್ ಉದ್ಯೋಗಿ, ಕೆನರಾ ಬ್ಯಾಂಕ್ ಆಫೀಸರ್ಸ್ ಅಸೋಸಿಯೇಷನ್ ರಿಜಿನಲ್ ಸೆಕ್ರೆಟರಿ ಶಿವಾನಂದ ಹುಂಬರವಾಡಿ ಅವರ ತಾಯಿ.

Tags:

error: Content is protected !!