ಸಿಎಂ ಬಸವರಾಜ ಬೊಮ್ಮಾಯಿ ಇಂದು ಶನಿವಾರ ಪಬ್ಲಿಕ್ ಟಿ.ವಿ ದಶಮಾನೋತ್ಸವ ಮತ್ತು ಜ್ಞಾನದೀವಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಪಬ್ಲಿಕ್ ಟಿ ವಿ ದಶಮಾನೋತ್ಸವ ಕಾರ್ಯಕ್ರಮದ ಸಂಭ್ರಮದಲ್ಲಿ ಪಾಲ್ಗೊಂಡು ಜ್ಞಾನದೀವಿಗೆ ಕಾರ್ಯಕ್ರಮದಡಿ ಶಿಗ್ಗಾವಿಯ ವಿವಿಧ ಶಾಲಾ ವಿದ್ಯಾರ್ಥಿಗಳಿಗೆ ಟ್ಯಾಬ್ ಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಪಬ್ಲಿಕ್ ಟಿವಿ ಮುಖ್ಯಸ್ಥ ರಂಗನಾಥ್ ಉಪಸ್ಥಿತರಿದ್ದರು.
