ಸ್ವಾವಲಂಬಿ ಮತ್ತು ಆಧುನಿಕ ಭಾರತವನ್ನು ಮಾಡುವುದು ನಮಗೆ ಬಹಳ ಮುಖ್ಯ. ಭಾರತವನ್ನು ಆಧುನಿಕತೆಯ ದಿಕ್ಕಿನಲ್ಲಿ ಮುನ್ನಡೆಸಲು ಈ ಬಜೆಟ್ ಹಲವಾರು ಪ್ರಮುಖ ನಿಬಂಧನೆಗಳನ್ನು ಹೊಂದಿದೆ. ಕಳೆದ 7 ವರ್ಷಗಳಲ್ಲಿ ಕೈಗೊಂಡ ನಿರ್ಧಾರಗಳಿಂದ ಭಾರತದ ಆರ್ಥಿಕತೆ ನಿರಂತರವಾಗಿ ವಿಸ್ತರಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಬುಧವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಆತ್ಮನಿರ್ಭರ್ ಅರ್ಥ ವ್ಯವಸ್ಥೆ ಬಗ್ಗೆ ವಚ್ರ್ಯುವಲ್ ಆಗಿ ಮಾತನಾಡಿದರು. ನಿನ್ನೆ 2022-23ನೇ ಸಾಲಿನ ಬಜೆಟ್ನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಿದ ಬೆನ್ನಲ್ಲೇ, ಇಂದು ಪ್ರಧಾನಿ ಮೋದಿ ಆ ಬಗ್ಗೆ ಮಾತನಾಡಿದರು. ಪ್ರಧಾನಿಯವರ ವಚ್ರ್ಯುವಲ್ ಭಾಷಣ ಕೇಳಲು, ದೇಶಾದ್ಯಂತ ಜಿಲ್ಲಾ ಮಟ್ಟದ ಆಯ್ದ ಸ್ಥಳಗಳಲ್ಲಿ ಎಲ್ಇಡಿ ಪರದೆಗಳ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ನ್ನು ಅದರ ವಿಶಾಲತೆಯನ್ನು ಗಮನದಲ್ಲಿಟ್ಟುಕೊಂಡು ಸಮಯೋಚಿತವಾಗಿ ವಿವರಿಸಿದರು.

ನಾನು ಇಂದು ಬಜೆಟ್ನ ಪ್ರಮುಖ ಅಂಶಗಳತ್ತ ಗಮನ ಹರಿಸಲು ಪ್ರಯತ್ನಿಸುತ್ತೇನೆ. ಭಾರತದ ಬಗೆಗಿನ ವಿಶ್ವದ ಬದಲಾದ ದೃಷ್ಟಿಕೋನದೊಂದಿಗೆ, ನಮ್ಮ ಆರ್ಥಿಕತೆಯನ್ನು ಬಲಪಡಿಸುವ ಮೂಲಕ ದೇಶವನ್ನು ತ್ವರಿತ ಗತಿಯಲ್ಲಿ ಮುನ್ನಡೆಸುವುದು ನಮಗೆ ಅನಿವಾರ್ಯವಾಗಿದೆ. ಇದು ಹೊಸ ಅವಕಾಶಗಳ ಸಮಯ, ಹೊಸ ಸಂಕಲ್ಪಗಳ ನೆರವೇರಿಕೆಯ ಸಮಯ. ಭಾರತವು ಸ್ವಾವಲಂಬಿಯಾಗುವುದು ಮತ್ತು ಸ್ವಾವಲಂಬಿ ಭಾರತದ ಅಡಿಪಾಯದ ಮೇಲೆ ಆಧುನಿಕ ಭಾರತವನ್ನು ನಿರ್ಮಿಸುವುದು ಬಹಳ ಮುಖ್ಯ. ಭಾರತವು ಶತಮಾನದ ಕೆಟ್ಟ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುತ್ತಿದೆ. ಎರಡನೇ ಮಹಾಯುದ್ಧದ ನಂತರ ಇಡೀ ವಿಶ್ವದ ಕ್ರಮವೇ ಬದಲಾಯಿತು. ಅಂತೆಯೇ, ಕೊವಿಡ್-19 ಸಾಂಕ್ರಾಮಿಕದ ನಂತರ,
ವಿಶ್ವ ಕ್ರಮಾಂಕ ಬದಲಾಗುತ್ತಿದೆ. ಕಳೆದ ವರ್ಷ ಭಾರತದಲ್ಲಿ ಎಫ್ಡಿಐ 80 ಬಿಲಿಯನ್ ಡಾಲರ್ ದಾಟಿದೆ. ಬಜೆಟ್ಗೆ ಹೆಚ್ಚು ಮೆಚ್ಚುಗೆ ವ್ಯಕ್ತವಾಗಿದೆ. 7 ವರ್ಷಗಳ ಹಿಂದೆ, ಭಾರತದ ಜಿಡಿಪಿ 1 ಲಕ್ಷ 10,000 ಕೋಟಿ ರೂ.ಗಳಷ್ಟಿತ್ತು ಆದರೆ ಇಂದು ಅದು ಸುಮಾರು 2 ಲಕ್ಷದ 30,000 ಕೋಟಿ ರೂ ಆಗಿದೆ.ದೇಶದ ವಿದೇಶೀ ವಿನಿಮಯ ಮೀಸಲು ಕೂಡ 200 ಶತಕೋಟಿಯಿಂದ ಡಾಲರ್ನಿಂದ 630 ಶತಕೋಟಿ ಡಾಲರ್ಗೆ ಏರಿದೆ. ಇದಕ್ಕೆಲ್ಲಾ ನಮ್ಮ ಸರ್ಕಾರದ ಪರಿಣಾಮಕಾರಿ ನೀತಿಗಳೇ ಕಾರಣ ಎಂದರು.
ಕೆನ್-ಬೆಟ್ವಾ ನದಿ ಜೋಡಣೆ ಯೋಜನೆಯು ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶವನ್ನು ವ್ಯಾಪಿಸಿರುವ ಬುಂದೇಲ್ಖಂಡದ ಮುಖವನ್ನು ಬದಲಾಯಿಸಲಿದೆ. ನಮ್ಮ ಸರ್ಕಾರದ ಪ್ರಯತ್ನದಿಂದ ಸುಮಾರು 9 ಕೋಟಿ ಗ್ರಾಮೀಣ ಕುಟುಂಬಗಳನ್ನು ಈಗಾಗಲೇ ಸ್ಥಾಪಿಸಲಾಗಿದೆ. ಈ ಪೈಕಿ ಕಳೆದ 2 ವರ್ಷಗಳಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ 5 ಕೋಟಿಗೂ ಹೆಚ್ಚು ಸಂಪರ್ಕಗಳನ್ನು ಅಳವಡಿಸಲಾಗಿದೆ. ಇದು ಬಡತನವನ್ನು ಹೋಗಲಾಡಿಸಲು ಮತ್ತು ಅವರನ್ನು ಮುಂದೆ ಕೊಂಡೊಯ್ಯಲು ಸಹಾಯ ಮಾಡುತ್ತದೆ. ಬಡವರು, ಮಧ್ಯಮ ವರ್ಗದವರು, ಯುವಕರಿಗೆ ಮೂಲಭೂತ ಅವಶ್ಯಕತೆಗಳನ್ನು ಒದಗಿಸಲು ಬಜೆಟ್ ಗಮನ ಹರಿಸಿದೆ. ಗಡಿಭಾಗದ ಗ್ರಾಮಗಳ ಅಭಿವೃದ್ಧಿಗೂ ಬಜೆಟ್ನಲ್ಲಿ ಒತ್ತು ನೀಡಲಾಗಿದೆ. ಗಡಿಯಲ್ಲಿರುವ ಶಾಲೆಗಳಲ್ಲಿ ಎನ್ಸಿಸಿ ಕೇಂದ್ರಗಳನ್ನು ತರಲಾಗುವುದು ಎಂದರು.
ಇಂದು, ನಮ್ಮ ದೇಶವು ಬೃಹತ್ ಪ್ರಮಾಣದಲ್ಲಿ ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುತ್ತಿದೆ ಮತ್ತು ನಾವು ಆಮದುಗಳ ಮೇಲೆ ಅವಲಂಬಿತರಾಗಿದ್ದೇವೆ. ಬೇಳೆಕಾಳುಗಳು ಪೌಷ್ಟಿಕಾಂಶದ ಅವಿಭಾಜ್ಯ ಅಂಗವಾಗಿದೆ. ಖಾದ್ಯ ತೈಲದಲ್ಲಿ ಸ್ವಾವಲಂಬಿಯಾಗಲು, ಆಮದುಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ನಾವು ರಾಷ್ಟ್ರೀಯ ಮಿಷನ್ ಅನ್ನು ಪ್ರಾರಂಭಿಸಿದ್ದೇವೆ ಮತ್ತು ಇದು ನಮ್ಮ ರೈತರನ್ನು ಮತ್ತಷ್ಟು ಬಲಪಡಿಸುತ್ತದೆ. ಅತಿ ಶೀಘ್ರದಲ್ಲಿ ಪ್ರತಿ ಹಳ್ಳಿಯೂ ಆಪ್ಟಿಕಲ್ ಫೈಬರ್ ಸಂಪರ್ಕವನ್ನು ಹೊಂದಿರುತ್ತದೆ. 5ಜಿ ತಂತ್ರಜ್ಞಾನವು ಹೊಸ ಯುಗವನ್ನು ಪ್ರಾರಂಭಿಸುತ್ತದೆ. ಎಂಎಸ್ಪಿ ಕುರಿತು ಹಲವು ವಿಷಯಗಳನ್ನು ಹೇಳಲಾಗಿದೆ. ಆದರೆ ರೈತರು ಈ ಋತುವಿನಲ್ಲಿ ಭತ್ತಕ್ಕೆ 1.5 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಎಂಎಸ್ಪಿ ಪಡೆಯುವ ನಿರೀಕ್ಷೆಯಿದೆ ಎಂದು ಪ್ರಧಾನಿ ಹೇಳಿದರು.
ಒಟ್ಟಿನಲ್ಲಿ ಬಜೆಟ್ನಲ್ಲಿ ಮಂಡಿಸಿದ ಹಲವು ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಅವರು ಮಾತನಾಡಿದರು. ಇನ್ನು ಬೆಂಗಳೂರಿನಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವನ್ನು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವ ಗೋವಿಂದ ಕಾರಜೋಳ, ಶಾಸಕರಾರ ರಾಜಕುಮಾರ ಪಾಟೀಲ್ ತೇಲ್ಕೂರ, ಎನ್.ರವಿಕುಮಾರ್ ಮತ್ತು ಇತರರು ಉಪಸ್ಥಿತರಿದ್ದರು.