ರಾಜ್ಯಕ್ಕೆ ವ್ಯಾಪಿಸುತ್ತಿರುವ ಹಿಜಾಬ್-ಕೇಸರಿ ವಿವಾದ ಕಿಚ್ಚು ಹೊತ್ತಿಕೊಂಡಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಕಾಲೇಜುಗಳಿಗೆ ಪೆÇಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ನಗರದ ಎಲ್ಲ ಕಾಲೇಜುಗಳ ಎದುರು ಪೆÇಲೀಸರ ನಿಯೋಜನೆ ಮಾಡಲಾಗಿದೆ.

ಹೌದು ರಾಜ್ಯಾಧ್ಯಂತ ಶಾಲಾ-ಕಾಲೇಜುಗಳಿಗೆ 3 ದಿನ ರಜೆ ಇದ್ದರೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಗಾವಿಯ ಕಾಲೇಜುಗಳಿಗೆ ಪೆÇಲೀಸ್ ಕಣ್ಗಾವಲು ಇಡಲಾಗಿದೆ. ಇಂದು ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಸಾಧ್ಯತೆ ಹಿನ್ನೆಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳ ಎದುರು ಪೆÇಲೀಸ್ ಭದ್ರತೆ ನಿಯೋಜಿಸಲಾಗಿದೆ.

ಜ್ಯೋತಿ ಕಾಲೇಜು, ಸರ್ದಾರ್ ಕಾಲೇಜು, ಆರ್.ಎನ್.ಶೆಟ್ಟಿ ಕಾಲೇಜು, ಲಿಂಗರಾಜ್ ಕಾಲೇಜುಗಳಿಗೆ ಭದ್ರತೆ ಒದಗಿಸಲಾಗಿದೆ. ಪೆÇಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ನಗರದ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ ಭದ್ರತೆ ಪರಿಶೀಲನೆ ನಡೆಸಿದರು.