Accident

KSRTC ಬಸ್-ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಕಾರ್ಮಿಕರ ಸಾವು

Share

KSRTC ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೆ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಚಿಕ್ಕೋಡಿ ತಾಲೂಕಿನ ಕೇರೂರ ಕ್ರಾಸ್ ಬಳಿ‌‌ ನಡೆದಿದೆ.

ಚಿಕ್ಕೋಡಿ ಪಟ್ಟಣದ ಹೊರವಲಯದ ಕೆರೂರ ಕ್ರಾಸ್ ಬಳಿಯ ಚಿಕ್ಕೋಡಿ-ಮಿರಜ ರಾಜ್ಯ ಹೆದ್ದಾರಿಯಲ್ಲಿ ಬಸ್-ಬೈಕ್ ನಡುವೆ ಅಪಘಾತ ಸಂಭವಿಸಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಮೇಲೆಯೇ ಬಸ್ ಎಗರಿದೆ. ಪರಿಣಾಮ ಚಿಕ್ಕೋಡಿಯಿಂದ ಅಂಕಲಿಗೆ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಇಬ್ಬರು ಕಾರ್ಮಿಕರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಅಂಕಲಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags:

error: Content is protected !!