ಕರ್ನಾಟಕ ಎಂದರೇ ಒಂದು ಎನ್ನುವ ಭಾವನೆ ಹಾಗೂ ಕರ್ನಾಟಕದ ಸಮಗ್ರ ಅಭಿವೃದ್ಧಿ ನಮ್ಮ ಸರ್ಕಾರದ ಆಶಯವಾಗಿದೆ. ಅಭಿವೃದ್ಧಿ ವಿಷಯದಲ್ಲಿ ಎಂದಿಗೂ ನಾವು ಬೇಧಭಾವ ಮಾಡಿಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಬೀದರ ಜಿಲ್ಲೆಯ ಔರಾದ್ನಲ್ಲಿ ನಡೆದ ಬಿಜೆಪಿಯ ಜನ ಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ ಅವಶ್ಯಕತೆ ಇದ್ದ ಕಡೆ ಅಭಿವೃದ್ಧಿಗೆ ಮುಂದಾಗಿದ್ದೇವೆ. ಬೀದರ್ ಜಿಲ್ಲೆಯ ಔರಾದ್ ಹಾಗೂ ಭಾಲ್ಕಿ ವಿಧಾನಸಭಾ ಕ್ಷೇತ್ರಗಳ ಕೆರೆ ತುಂಬಿಸುವ ಯೋಜನೆಗೆ ಅನುದಾನ ನೀಡಿದ್ದೇವೆ. ಅಭಿವೃದ್ಧಿಯ ವಿಷಯದಲ್ಲಿ ಪ್ರಾದೇಶಿಕ ಅಸಮತೋಲನ ಇರಬಾರದು. ತಲಾ ಆದಾಯ ಎಲ್ಲೆಡೆ ಏಕರೂಪದ್ದಾಗಿರಬೇಕು. ಬೆಂಗಳೂರು ಹಾಗೂ ಬೀದರ್ ನಡುವೆ ತಲಾ ಆದಾಯದಲ್ಲಿ ಸಮಾನತೆ ಬರಬೇಕಾದರೆ ಬೀದರ್ ಎಲ್ಲಾ ರಂಗಗಳಲ್ಲೂ ಅಭಿವೃದ್ಧಿ ಸಾಧಿಸಬೇಕು ಮತ್ತು ಅದುವೇ ನಮ್ಮ ಗುರಿ ಆಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಮಾವೇಶದಲ್ಲಿ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರಪಾಟೀಲ ಮುನೆನಕೊಪ್ಪ, ಕೇಂದ್ರ ಸಚಿವರಾದ ಭಗವಂತ ಖೂಬಾ, ಪಶು ಸಂಗೋಪನೆ ಸಚಿವರಾದ ಪ್ರಭು. ಚವ್ಹಾಣ, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷ ಮಾರುತಿ ರಾವ್ ಮುಳೆ ಸೇರಿದಂತೆ ಸಾವಿರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.