Bidar

ನಾವಿಕನಿಲ್ಲದೆ ಬಿಜೆಪಿ ದೋಣಿ ಅಲುಗಾಡುತ್ತಿದೆ: ಸಚಿವ ಕೃಷ್ಣ ಭೈರೇಗೌಡ

Share

ನಾವಿಕನಿಲ್ಲದೆ ಬಿಜೆಪಿ ದೋಣಿ ಅಲುಗಾಡುತ್ತಿದೆ. ಬಿಜೆಪಿ ಮುಳುಗುತ್ತಿದೆ ಅನ್ನೋ ಭಯ ಬಿಜೆಪಿ ಶಾಸಕರಿಗೆ ಕಾಡುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ವ್ಯಂಗ್ಯಮಾಡಿದರು.

ನಾವಿಕನಿಲ್ಲದೆ ಬಿಜೆಪಿ ದೋಣಿ ಅಲುಗಾಡುತ್ತಿದೆ. ಬಿಜೆಪಿ ಮುಳುಗುತ್ತಿದೆ ಅನ್ನೋ ಭಯ ಬಿಜೆಪಿ ಶಾಸಕರಿಗೆ ಕಾಡುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ವ್ಯಂಗ್ಯಮಾಡಿದರು. ಸುದ್ದಿಗಾರರ ಜೊತೆ ಮಾತನಾಡಿ, ಸರ್ಕಾರ ರಚನೆಯಾಗಿ 100 ದಿನ ಕಳೆಯುತ್ತಾ ಬಂದರೂ, ವಿಪಕ್ಷ ನಾಯಕನ ಅಯ್ಕೆ ಮಾಡುವ ಸಾಮರ್ಥ್ಯ ವಿಪಕ್ಷಗಳಿಗೆ ಇಲ್ಲ. ವಿಪಕ್ಷ ನಾಯಕನನ್ನು ಮುಖ್ಯಮಂತ್ರಿಗಳ ನೆರಳು ಎಂದು ಕರಿಯುತ್ತಾರೆ. ಆದರೆ, ರಾಜ್ಯದಲ್ಲಿ ವಿಪಕ್ಷ ನಾಯಕನನ್ನು ಅಯ್ಕೆ ಮಾಡದೆ ರಾಜ್ಯಕ್ಕೆ ಬಿಜೆಪಿ ಅವಮಾನ ಮಾಡುತ್ತಿದೆ.

ಬಿಜೆಪಿಯಲ್ಲಿ ಆಂತರಿಕ ಕಚ್ಚಾಟವೇ ಹೆಚ್ಚಾಗಿದೆ. ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ ಮಾಡಲಾಗದೆ ಒದ್ದಾಡುತ್ತಿದೆ. ಬಿಜೆಪಿ ಸಂಪೂರ್ಣ ಗೊಂದಲದ ಗೂಡಾಗಿದೆ. ಜೆಡಿಎಸ್‌ ಪಕ್ಷ ಕೂಡಾ ಅದೇ ರೀತಿಯಾಗಿದೆ ಎಂದು ವ್ಯಂಗ್ಯವಾಡಿದರು. ಬೇರೆ ಪಕ್ಷಗಳಿಗೆ ಹೊಲಿಸಿದರೆ ನಮ್ಮ ಪಕ್ಷ ಜನಪರವಾಗಿದೆ. ಹಾಗಾಗಿ, ಬೇರೆ ಶಾಸಕರು ನಮ್ಮ ಪಕ್ಷಕ್ಕೆ ಬರೋಕೆ ಮನಸ್ಸು ಮಾಡಿರಬಹುದು ಎಂದರು. ನನಗೆ ಎಷ್ಟುಜನ ಬರ್ತಾರೆ ಅನ್ನೊ ಮಾಹಿತಿ ಇಲ್ಲ. ನಮಗೇನು ಶಾಸಕರನ್ನು ಕರೆ ತರಬೇಕು ಎನ್ನುವ ಅವಶ್ಯಕತೆಯಿಲ್ಲ, ನಮ್ಮ ಸರ್ಕಾರ ಸುಭದ್ರವಾಗಿದೆ. ಬರುವವರ ಬಗ್ಗೆ ಪಕ್ಷದ ಮುಖಂಡರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

Tags:

error: Content is protected !!