ಬೀದರ: ನನ್ನ ವಿರುದ್ಧ ಗಂಭೀರ ಆರೋಪ ಮಾಡಿ ಶಾಸಕ ಪ್ರಭು ಚವ್ಹಾಣ ಅವರು ಚಾರಿತ್ರೆಗೆ ಧಕ್ಕೆ ತಂದಿದ್ದು, ಅವರ ವಿರುದ್ಧ ನೂರು ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕಲು ಚಿಂತಿಸಿದ್ಧೆನೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಮುಂದಿನ ಏಳು ಜನ್ಮ ಹಾಗೂ ಹಿಂದಿನ ಏಳು ಜನ್ಮದಲ್ಲೂ ಈ ರೀತಿ ನೀಚ ಕೃತ್ಯ ಮಾಡುವ ಯೋಚನೆ ನನ್ನಲ್ಲಿ ಬರಲ್ಲ. ಶಾಸಕ ಚವ್ಹಾಣ ಕಾಂಗ್ರೆಸ್ ಜೊತೆಗೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದು, ಅದಕ್ಕಾಗಿ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಜಿಲ್ಲೆಯಲ್ಲಿ ಬಿಜೆಪಿ ಅಂದರೆ ನಾನು, ನಾನು ಅಂದರೆ ಬಿಜೆಪಿ ಎಂಬ ಅಹಂಕಾರ ಚವ್ಹಾಣ
ಬೆಳಿಸಿಕೊಂಡಿದ್ದಾರೆ. ಚವ್ಹಾಣ ಅವರ ಆರೋಪ ಕುರಿತಂತೆ ಪಕ್ಷದ ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ. ಇಬ್ಬರ ನಡುವಿನ ಗೊಂದಲವನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಇದು ಬಗೆಹರಿಯದಿದ್ದರೆ, ಪಕ್ಷದ ಅನುಮತಿ ಪಡೆದು ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದು ತಿಳಿಸಿದರು.
ಪ್ರಭು ಚವ್ಹಾಣ್ ವಿರುದ್ಧ ₹100 ಕೋಟಿ ಮಾನನಷ್ಟ ಮೊಕದ್ದಮೆಗೆ ಮುಂದಾದ ಖೂಬಾ
ಬೀದರ: ನನ್ನ ವಿರುದ್ಧ ಗಂಭೀರ ಆರೋಪ ಮಾಡಿ ಶಾಸಕ ಪ್ರಭು ಚವ್ಹಾಣ ಅವರು ಚಾರಿತ್ರೆಗೆ ಧಕ್ಕೆ ತಂದಿದ್ದು, ಅವರ ವಿರುದ್ಧ ನೂರು ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕಲು ಚಿಂತಿಸಿದ್ಧೆನೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಮುಂದಿನ ಏಳು ಜನ್ಮ ಹಾಗೂ ಹಿಂದಿನ ಏಳು ಜನ್ಮದಲ್ಲೂ ಈ ರೀತಿ ನೀಚ ಕೃತ್ಯ ಮಾಡುವ ಯೋಚನೆ ನನ್ನಲ್ಲಿ ಬರಲ್ಲ. ಶಾಸಕ ಚವ್ಹಾಣ ಕಾಂಗ್ರೆಸ್ ಜೊತೆಗೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದು, ಅದಕ್ಕಾಗಿ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಜಿಲ್ಲೆಯಲ್ಲಿ ಬಿಜೆಪಿ ಅಂದರೆ ನಾನು, ನಾನು ಅಂದರೆ ಬಿಜೆಪಿ ಎಂಬ ಅಹಂಕಾರ ಚವ್ಹಾಣ
ಬೆಳಿಸಿಕೊಂಡಿದ್ದಾರೆ. ಚವ್ಹಾಣ ಅವರ ಆರೋಪ ಕುರಿತಂತೆ ಪಕ್ಷದ ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ. ಇಬ್ಬರ ನಡುವಿನ ಗೊಂದಲವನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಇದು ಬಗೆಹರಿಯದಿದ್ದರೆ, ಪಕ್ಷದ ಅನುಮತಿ ಪಡೆದು ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದು ತಿಳಿಸಿದರು.