Bailahongala

ಬೈಲಹೊಂಗಲದಲ್ಲಿ ಪೊಲೀಸ್ ಪೇದೆ ನೇಣು ಬಿಗಿದು ಆತ್ಮಹತ್ಯೆ

Share

 

ಬೈಲಹೊಂಗಲ ಪಟ್ಟಣದ ತಹಶೀಲ್ದಾರ ಕಚೇರಿ ಆವರಣದ ಸಭಾ ಭವನ ಪಕ್ಕದ ಮರಕ್ಕೆ ಕುಡಿದ ಅಮಲಿನಲ್ಲಿ ಪೊಲೀಸ್ ಪೇದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಮುರಕಿಬಾಂವಿ ಗ್ರಾಮದ ಬಸನಗೌಡ ಈರಪ್ಪ ಗೌಡರ (40) ಆತ್ಮಹತ್ಯೆ ಮಾಡಿಕೊಂಡ ಪೇದೆ. ಈ ಪೇದೆ ತಾಲ್ಲೂಕಿನ ದೊಡವಾಡ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಚುನಾವಣೆ ಕರ್ತವ್ಯ ಮುಗಿದ ಮೇಲೆ ರಜೆ ಪಡೆದಿದ್ದರು. ಜೀವನದಲ್ಲಿ ಜಿಗುಪ್ಪೆ ಹೊಂದಿ ಕುಡಿದ ಮತ್ತಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ

Tags:

error: Content is protected !!