Crime

ಬಕ್ರೀದ್ ಹಬ್ಬದಂದು ಗೋ ಹತ್ಯೆ ಆರೋಪ..!! ಪೊಲೀಸ್ ತನಿಖೆ ಆರಂಭ

Share

ರಾಯಬಾಗ ತಾಲೂಕಿನ ನಾಗರಾಳ ಗ್ರಾಮದಲ್ಲಿ ಬಕ್ರೀದ್ ಹಬ್ಬದಂದು ಗೋ ಹತ್ಯೆ ಆರೋಪ ಕೇಳಿ ಬಂದಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಾಗರಾಳ ಗ್ರಾಮದಲ್ಲಿ ಇವತ್ತು ಬಕ್ರಿದ್ ಹಬ್ಬದ ನಿಮಿತ್ಯವಾಗಿ ಮುಸ್ಲಿಂ ಬಾಂಧವರು ಗೋ ಹತ್ಯೆ ಮಾಡಿದ್ದಾರೆ ಎಂದು ರಾಯಬಾಗ ಭಜರಂಗ ದಳದ ಕಾರ್ಯಕರ್ತರು ಸ್ಥಳೀಯ ರಾಯಬಾಗ ಪೊಲೀಸ್ ಠಾಣೆಗೆ ತಿಳಿಸಿದ್ದಾರೆ, ತಕ್ಷಣ ಘಟನಾ ಸ್ಥಳಕ್ಕೆ ರಾಯಬಾಗ ಪೊಲೀಸ್ ಠಾಣೆಯ ಸಿ ಪಿ ಐ ಶ್ರೀ ಎಚ್ ಡಿ ಮುಲ್ಲಾ , ರಾಯಬಾಗ ಪಿಎಸ್ಐ, ಹಾಗೂ ಸಿಬ್ಬಂದಿಗಳು ಆಗಮಿಸಿ ಘಟನಾ ಸ್ಥಳವನ್ನು ಪರಿಶೀಲಿಸಿದಾಗ ಗೋ ಹತ್ಯೆ ಆಗಿರುವುದನ್ನು ಮನಗಂಡು ಪಂಚನಾಮೆಗೆ ರಾಯಬಾಗ ಪಶುಆಸ್ಪತ್ರೆ ಗೆ ರವಾನಿಸಲಾಗಿದೆ. ಗೋ ಹತ್ಯೆ ಮಾಡಿದವರು ಪರಾರಿ ಆಗಿದ್ದು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ.

Tags:

error: Content is protected !!