Dharwad

ಡಿಸಿಎಂ, ಸಿಎಂ ಹುದ್ದೆ ಖಾಲಿ ಇಲ್ಲ – ಸಚಿವ ಸಂತೋಷ್ ಲಾಡ್

Share

ಸಿಎಂ, ಡಿಸಿಎಂ ಹುದ್ದೆ ವಿಚಾರ, ಆ ರೀತಿ ಯಾವುದು ಖಾಲಿ ಇಲ್ಲ. ಅದನ್ನೆಲ್ಲ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಒಕ್ಕಲಿಗ ಶ್ರೀಗಳ ಹೇಳಿಕೆಗೆ ಮುಖ್ಯಮಂತ್ರಿಗಳು ಸ್ಪಷ್ಟಿಕರಣ ಕೊಟ್ಟಿದ್ದಾರೆ. ಡೆಮಾಕ್ರಟಿಕ್ ಎಲೆಸ್ಟೆಡ್ ಸರ್ಕಾರ ಇದು ಎಂದು ಸಚಿವ ಸಂತೋಷ್ ಲಾಡ್ ಹೇಳಿದರು
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಂತೋಷ್ ಲಾಡ್ ಮುಖ್ಯಮಂತ್ರಿ ಆಗಬೇಕಾದ್ರೆ ಹೈಕಮಾಂಡ, ಎಲ್ಲ ಶಾಸಕರು ನಿರ್ಧಾರದ ಮೇಲೆ ಆಗಬೇಕು, ಹೈಕಮಾಂಡ ಏನು ತೀರ್ಮಾನ ಮಾಡಿರುತ್ತೆ ಅದೇ ಪೈನಲ್. ಅದಕ್ಕೆ ಸಿಎಂ ಸ್ಪಷ್ಟನೆ ನೀಡಿದ್ದಾರೆ ಎಂದು ಹೇಳಿದ್ದರು .

ಸರ್ಕಾರ ನಡೆಸಬೇಕಾದ್ರೆ ದರ ಏರಿಸಲೇಬೇಕು; ಹಾಲಿನ ದರದ ಬಗ್ಗೆ ಈಗಾಗಲೇ ಸಿಎಂ ಅವರು ಸ್ಪಷ್ಟೀಕರಣ ಕೊಟ್ಟಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ಹಾಲಿನ, ಪೆಟ್ರೋಲ್ ಡಿಸೇಲ್ ದರ ಎಲ್ಲವೂ ಕಡಿಮೆ ಇದೆ. ಸರ್ಕಾರ ನಡೆಸಬೇಕಾದ್ರೆ ದರ ಏರಿಸಬೇಕಾಗುತ್ತದೆ. 60 ಸಾವಿರ ಕೋಟಿ ರೂಪಾಯಿಯನ್ನು ನಾವು ಗ್ಯಾರಂಟಿಗೆ ಕೊಡಬೇಕಾಗುತ್ತೆ. ಅದಕ್ಕಾಗಿ ಮಾಡಬೇಕು. ಹತ್ತು ವರ್ಷಗಳಲ್ಲಿ ಕೇಂದ್ರ ಸರ್ಕಾರ ಎಷ್ಟು ಜಾಸ್ತಿ ಮಾಡಿದ್ದಾರೆ ಅದರ ಬಗ್ಗೆ ಮಾತಾಡೊದು ಬೇಡ್ವಾ. ನಿರ್ಮಲಾ ಸೀತಾರಾಮನ್ ಇದರ ಬಗ್ಗೆ ಮಾತಾಡಬೇಕು. ಅವರು ದೇಶ ನಡೆಸಬೇಕಾದ್ರೆ, ನಾವು ರಾಜ್ಯ ನಡೆಸಬೇಕೆಂದು ಬೆಲೆ ಏರಿಕೆಯನ್ನು ಸಮರ್ಥನೆ ಮಾಡಿಕೊಂಡರು.

ರಾಮ ಮಂದಿರ ಸೋರುತ್ತಿದೆ ಯಾರ ನಿಲ್ಲಿಸಬೇಕು; ಬಿಜೆಪಿ ಅವರು ಆರೋಪ ಮಾಡೊದೆ ಅವರ ಕೆಲಸ, ರಾಮ ಮಂದಿರ ಸೋರುತ್ತಿದೆ ಅದನ್ನ ಯಾರ ಹೋಗಿ ನಿಲ್ಲಸಬೇಕು. ನೀಟ್ ಪೇಪರ್ ಲೀಕ್ ಆಯಿತು ಅದರ ಬಗ್ಗೆ ಯಾರು ಮಾತಾಡೋದ ಬೇಡ್ವಾ. ಬಿಜೆಪಿ ಅವರು ಯಾವುದು ರೂಲಿಂಗ್ ಸರ್ಕಾರ ಇರುತ್ತೆ ಅದರ ವಿರುದ್ಧ ಮಾತಾಡೋದೆ ಅವರ ಕೆಲಸ ಎಂದು ಹರಿಹಾಯ್ದರು.

ಬರ ಪರಿಹಾರದ ವಿಚಾರಕ್ಕೆ ಮಾತನಾಡಿ, ನಾವು ಸರ್ಕಾರ ನಡೆಸ್ತಾ ಇದ್ದು ಒಂದು ವರ್ಷ ಆಯ್ತು, ಕೇಂದ್ರ ಸರ್ಕಾರದ ಹತ್ತು ವರ್ಷಗಳಲ್ಲಿ ಯಾವುದೇ ಲೋಪದೋಷಗಳು ಇಲ್ವಾ. ಬೆಲೆ ಏರಿಕೆ, ಎಂಪ್ಲಾಯಮೆಂಟ್, ಜಿಡಿಪಿ ಇವು ಯಾವುದು ಅವರ ಕಾಣ್ತಿಲ್ಲಾ ಎಂದು ಸಚಿವ ಸಂತೋಷ ಲಾಡ್ ಹೇಳಿದರು .

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತೇವೆ. ಆದ್ರೆ ನಮಗೆ ಲಾಜಿಕ್ ಸಂಖ್ಯೆ ಇಲ್ಲ ಪಾಲಿಕೆ ವಿರೋಧ ಪಕ್ಷದ ನಾಯಕಿ ಸುವರ್ಣ ಕಲಕುಂಟ್ಲಾ ಪ್ರಕಾರ ಕಣಕ್ಕೆ ಇಳಿಸಲಾಗುವುದು. ಎಂದು ಹೇಳಿದ್ದರು .

Tags:

error: Content is protected !!