ಹುಕ್ಕೇರಿ ನಗರದ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರವನ್ನು ಆಧುನಿಕರಣ ಮಾಡಲು ಶಾಸಕ ನಿಖೀಲ ಕತ್ತಿ ಭೂಮಿ ಪೂಜೆ ನೆರವೇರಿಸಿದರು.

ಅವರು ಇಂದು ಹುಕ್ಕೇರಿ ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಏರ್ಪಡಿಸಿದ ಸಮಾರಂಭದಲ್ಲಿ ಭೂಮಿ ಪೂಜೆ ನೇರವೆರಿಸಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಹುಕ್ಕೇರಿ ನಗರದ ಪ್ರವಾಸಿ ಮಂದಿರವನ್ನು ಲೋಕೋಪಯೋಗಿ ಮತ್ತು ಒಳನಾಡು ಬಂದರು ಅಭಿವೃದ್ಧಿ ಇಲಾಖೆ ವತಿಯಿಂದ ಸುಮಾರು 45 ಲಕ್ಷ ರೂಪಾಯಿ ವೆಚ್ಚದಲ್ಲಿ ನವೀಕರಣ ಮಾಡಲು ಚಾಲನೆ ನೀಡಲಾಗಿದೆ. ಗುತ್ತಿಗೆದಾರರಾದ ವಾದೀರಾಜ ಮೂರು ತಿಂಗಳಿನಲ್ಲಿ ಕಾಮಗಾರಿ ಪೂರ್ಣಗೊಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.( )
ಗುತ್ತಿಗೆದಾರ ವಾದೀರಾಜ ಶಾಸಕರಿಗೆ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಹೀರಾ ಶುಗರ ನಿರ್ದೆಶಕ ಅಶೋಕ ಪಟ್ಟಣಶೆಟ್ಟಿ, ಸತ್ಯಪ್ಪಾ ನಾಯಿಕ, ಶಿತಲ್ ಬ್ಯಾಳಿ, ಚನ್ನಪ್ಪ ಗಜಬರ, ರಾಜು ಮುನ್ನೋಳ್ಳಿ, ಗುರು ಕುಲಕರ್ಣಿ, ಪರಗೌಡಾ ಪಾಟೀಲ, ಮಧು ಕರನಿಂಗ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳಾದ ರವಿ ಮಾಡ್ಯಾಳ, ಪ್ರಭಾಕರ ಕಾಮತ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.