ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ನಲ್ಲಿ ನಿನ್ನೆ ರಾತ್ರಿ ನಡೆದ ಟಿ20 ವಿಶ್ವಕಪ್ 2024 ಫೈನಲ್ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಏಳು ರನ್ಗಳ ಅಂತರದಿಂದ ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರ ಹೊಮ್ಮಿದೆ.
ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು
ವಿಜಯಪುರ ನಗರದಲ್ಲಿ ಅಹಿಂದ ಮುಖಂಡ ಫಯಾಜ್ ಕಲಾದಗಿ ನೇತೃತ್ವದಲ್ಲಿ ಕ್ರಿಕೆಟ್ ಪ್ರೇಮಿಗಳು ನಗರದ ಗಾಂಧಿ ವೃತ್ತದಲ್ಲಿ ಯುವಕರು ಸಂಭ್ರಮಾಚರಿಸಿದರು. ರಾತ್ರೋರಾತ್ರಿ ರಸ್ತೆಗಿಳಿದು ಕಾರು– ಬೈಕ್ ಗಳಲ್ಲಿ ಪ್ರಮುಖ ರಸ್ತೆಗಳಲ್ಲಿ ಸುತ್ತುತ್ತ ‘ಇಂಡಿಯಾ–ಇಂಡಿಯಾ, ಎಂದು ಘೋಷಣೆ ಕೂಗಿದರು.
ನೂರಾರು ಕ್ರಿಕೆಟ್ ಅಭಿಮಾನಿಗಳು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ತ್ರಿವರ್ಣ ಧ್ವಜ ಹಿಡಿದು ಜೈಕಾರ ಹಾಕಿದರು.