Belagavi

ರಮೇಶ್ ಜಾರಕಿಹೊಳಿ ಏನು ಅಂತ ರಾಜ್ಯದ ಜನಕ್ಕೆ ಗೊತ್ತಿದೆ ; ಸಾಹುಕಾರ್ ವಿರುದ್ಧ ಗುಡುಗಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Share

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಗೆ ಡಿಸಿಎಂ ಸ್ಥಾನ ನೀಡುವುದು ಕಾಂಗ್ರೆಸ್ ಹೈಕ್ ಮಾಂಡ್ ನಿರ್ಧಾರ ಮಾಡುತ್ತೀದೆ ಎಂದು ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದರು .

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಎರಡು ವರ್ಷಕ್ಕೆ ಸಿಎಂ ಬದಲಾವಣೆಯಾಗಬೇಕೋ ಒಂದು ವರ್ಷಕ್ಕೆ ಸಿಎಂ ಬದಲಾವಣೆಯಾಗಬೇಕೋ ಎಂಬುದು ಹೈಕಮಾಂಡ್ ವೇದಿಕೆಯಲ್ಲಿ ನಿರ್ಣಯವಾಗುತ್ತದೆ. ಇದರ ಬಗ್ಗೆ ಯಾರು ಹೇಳಿಕೆ ಕೊಟ್ಟರೂ ಅಷ್ಟೇ. ಯಾವ ಶಾಸಕರು ಹೇಳಿಕೆ ಕೊಟ್ಟರೂ ಅದು ಅವರ ವೈಯಕ್ತಿಕ ವಿಚಾರ. ರಾಜ್ಯದಲ್ಲಿ ನಮಗೆ 136 ಜನ ಶಾಸಕರು ಇದ್ದಾರೆ ಯಾವ ಸಮಯದಲ್ಲಿ ಯಾರು ಸಿಎಂ, ಮಂತ್ರಿಯಾಗಬೇಕೋ ಆ ಸಮಯದಲ್ಲಿ ಅದು ಆಗೇ ಆಗುತ್ತದೆ ಎಂದು ಹೇಳಿದ್ದರು .

ವಿಷ ಕನ್ಯೆ ಎಂಬ ಪದ ಬಳಕೆ ಮಾಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ಉತ್ತರಿಸಿದ ಅವರು, ನಾನು ಅವರ ಹೇಳಿಕೆಗೆ ಉತ್ತರ ಕೊಡುವುದಿಲ್ಲ. ಜನರೇ ತಕ್ಕ ಉತ್ತರ ಕೊಡುತ್ತಾರೆ. ಭಾರತ ದೇಶದ ಸಂಸ್ಕೃತಿಯಲ್ಲಿ ವಿಶ್ವಾಸ ಇಟ್ಟವರು ನಾವು. ಅವರು ವಿಷ ಕನ್ಯೆ ಅಂತಾರೋ, ಇನ್ನೊಂದು ಕನ್ಯೆ ಅಂತಾರೋ ಅವರು ಏನೂ, ಸಂಸ್ಕೃತಿ ಏನು ಎನ್ನುವುದು ಇಡೀ ರಾಜ್ಯದ ಜನರು ನೋಡಿದ್ದಾರೆ. ಅವರ ಸಂಸ್ಕೃತಿ ಬಗ್ಗೆಯೂ ನೋಡಿದ್ದಾರೆ. ಅವರು ದೊಡ್ಡವರು ಅವರ ಬಗ್ಗೆ ಮಾತನಾಡಲ್ಲ ಎಂದರು.
ನಮ್ಮ ಬಳಿ ಎಲ್ಲಿ ದುಡ್ಡ ಇದೆ. ನಾನು ಹೆಸರಿಗಷ್ಟೆ ಲಕ್ಷ್ಮೀ ನನ ಬಳಿ ಹಣ ಇಲ್ಲ. ಅವರಿಗೆ ಸಾಹುಕಾರ್ ಅಂತಾರೆ ನಮ್ಮ ಬಳಿ ಎಲ್ಲಿ ದುಡ್ಡು ಸಾಹುಕಾರಗಳು ಅವರಲ್ವಾ ಎಂದು ಲೇವಡಿ ಮಾಡಿದರು.ನಾನು ಯಾರ ಬಳಿಯಾದರೂ ಹಣ ತೆಗದುಕೊಂಡಿದ್ದರೆ ದಾಖಲೆ ಕೊಡಲಿ ಆಮೇಲೆ ಮಾತನಾಡುತ್ತೇನೆ ಎಂದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ಯಾರ ಸೊಕ್ಕಿನಿಂದ ಏನಾಯಿತು ಎನ್ನುವುದು ರಾಜ್ಯದ ಜನರಿಗೆ ಗೊತ್ತಾಗಿದೆ. ಇಡೀ ಕರ್ನಾಟಕ ರಾಜ್ಯದಲ್ಲಿ ಹೆಚ್ಚಿನ ಮತಗಳಿಂದ ಚನ್ನರಾಜ ಹಟ್ಟಿಹೊಳಿ ಗೆಲುವು ಸಾಧಿಸಿದರು. ಬಳಿಕ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಗ್ರಾಮೀಣ ಮತಕ್ಷೇತ್ರದಲ್ಲಿ ಶತಾಯಗತಾಯ ನನಗೆ ಸೋಲಿಸಬೇಕು ಎಂದು ಬಂದಿದ್ದರು. ಅದಕ್ಕೆ ಜನ ಏನೂ ಉತ್ತರ ಕೊಟ್ಟಿದ್ದಾರೆ ಎನ್ನುವುದು ಗೊತ್ತು. ದೊಡ್ಡ ಹಾರವನ್ನು ತಂದು ಲಕ್ಷ್ಮೀ ಹೆಬ್ಬಾಳ್ಕರ್ ಕೊರಳಿಗೆ ಹಾಕುತ್ತೇನೆ ಎಂದು 2018ರಲ್ಲಿ ನಾನೇ ಗೆಲ್ಲಿಸಿದ್ದು, ನಾನೇ ಸೋಲಿಸುತ್ತೇನೆ ಎಂದಿದ್ದರು. ಇಲ್ಲಿಯವರೆಗೂ ನಾನು ಇನ್ನೂವರೆಗೂ ಹಾರ ಎಲ್ಲಿದೆ ಎಂದು ಕಾಯುತ್ತಿದ್ದೇನೆ. ಗೆದ್ದ ಮೇಲೂ ನಾನೂ ಉತ್ತರ ಕೊಡಲಿಲ್ಲ. ಈಗೂ ಉತ್ತರ ಕೊಡಲ್ಲ. ಕಾಲಾಯತ್ಸಮೈ ನಮಃ ಯಾರಿಗೆ ಸೊಕ್ಕು ಬಂದಿದೆ.ಯಾರು ಏನೂ ಮಾಡಿದ್ದಾರೆ ಎನ್ನುವ ಉತ್ತರ ಬರಲಿದೆ ಎಂದು ಹೇಳಿದ್ದರು .

ರಾಜಕಾರಣ ನಿಂತ ನೀರಲ್ಲ. ರಾಜಕಾರಣ ಎಂದರೆ ಯುದ್ಧದಲ್ಲಿ ಸೋಲನ್ನು ಒಪ್ಪಿಕೊಂಡು ಶಸ್ತ್ರಾಸ್ತ್ರವನ್ನು ತ್ಯಾಗ ಮಾಡಿದಾಗ ಅದು ಸೋಲು. ರಾಜಕಾರಣದಲ್ಲಿ ಸೋಲು ಒಂದೆ ಎಂದು ತೆಗೆದುಕೊಳ್ಳಲಾಗುವುದಿಲ್ಲ. ಸೋಲನ್ನು ಕೂಡ ಸಹ ಸಮಾನವಾಗಿ ಸ್ವೀಕಾರ ಮಾಡಿ ಗೆಲುವಿನ ಮುನ್ನಡಿನ್ನು ಬರೆದಿರುವುದು ಜನರಿಗೆ ಗೋತ್ತಿದೆ.ಈಗ ನನ್ನ ಮಗ ಸೋಲು ಕಂಡಿದ್ದಾನೆ. ಎಲ್ಲಿ ಸೋಲು ಕಂಡಿದ್ದಾನೋ ಅಲ್ಲಿಯೇ ಗೆಲ್ಲಬೇಕು ಎನ್ನುವ ಛಲ ನನ್ನ ಮಗ ಮಾಡಿದ್ದಾನೆ. ಇದೊಂದೆ ಸೋಲಿನಿಂದ ಕಂಗೇಡುವಂತಿಲ್ಲ. ನಾವು ಮೌನಕ್ಕೆ ಜಾರಿರುವುದು ಎಲ್ಲಿ ನಮ್ಮಿಂದ ತಪ್ಪಾಗಿದೆ ಎನ್ನುವುದನ್ನು ಹುಡುಕುತ್ತಿದ್ದೇವೆ ಎಂದು ಹೇಳಿದ್ದರು .

ನಾನು ಆಸೆ ಪಟ್ಟರೆ ಡಿಸಿಎಂ ಮಾಡಿ ಬಿಡುತ್ತಾರೆಯೇ ಎಂದು ಪ್ರಶ್ನಿಸಿದ ಅವರು, ನನಗೆ ಏನೇ ಸ್ಥಾನ ಮಾನ ಕೊಟ್ಟರು ಹೈಕಮಾಂಡ್ ತೀರ್ಮಾನ. ರಾಜ್ಯದಲ್ಲಿ ನನಗೆ ದೊಡ್ಡ ಇಲಾಖೆಯಲ್ಲಿ ಕೆಲಸ ಮಾಡುವ ಅವಕಾಶ ಕೊಟ್ಟಿದೆ. ಇದನ್ನು ನಿಭಾಯಿಸುತ್ತೇನೆ. ನಾನು ಮುಗಿಲಿಗೆ ಏಣಿ ಹಾಕುವಳು ಅಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

Tags:

error: Content is protected !!