Chikkodi

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಯನ್ನು ಮರೆತು ಬಿಟ್ಟಿದೆ: ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪೂರ ಆರೋಪ

Share

ಚಿಕ್ಕೋಡಿ: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ನೀಡಲಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಯನ್ನು ಮರೆತು ಬಿಟ್ಟಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪೂರ ಆರೋಪಿಸಿದರು.

ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರದಲ್ಲಿ ಸಾಕಷ್ಟು ಅನುದಾನ ಇದೆ. ಅದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು. ಅನುದಾನಿತ ಶಾಲೆಗಳಲ್ಲಿ ಖಾಲಿ ಉಳಿದಿರುವ ಶಿಕ್ಷಕರ ಹುದ್ದೆ ಭರ್ತಿ ಮಾಡಿಕೊಳ್ಳಬೇಕು. ವಿಶೇಷವಾಗಿ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಲಭ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು. ಸಮರ್ಪಕ ಅನುದಾನವಿಲ್ಲದೆ ಪಿಯು ಕಾಲೇಜುಗಳು ಮುಚ್ಚೂವ ಸ್ಥಿತಿಗೆ ಬಂದಿವೆ. ಸರ್ಕಾರ ಶಿಕ್ಷಣ ಕ್ಷೇತ್ರ ಬಲಪಡಿಸಲು ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಕೇಂದ್ರದಲ್ಲಿ ಪಿಎಂಶ್ರೀ ಮತ್ತು ಪಿಎಂ ಉಷಾ ಯೋಜನೆಯಡಿ ಸಾಕಷ್ಟು ಅನುದಾನ ಇದೆ. ಅದನ್ನು ತರುವ ಕೆಲಸವನ್ನು ವಾಯವ್ಯ ಶಿಕ್ಷಕರ ಮತಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಅವರು ಮಾಡಬೇಕು. ರಾಷ್ಟಿçÃಯ ಶಿಕ್ಷಣ ನೀತಿ ಮತ್ತು ರಾಜ್ಯ ಶಿಕ್ಷಣ ನೀತಿ ಗೊಂದಲದಲ್ಲಿ ರಾಜ್ಯದ ಶಾಲೆಗಳಿಗೆ ಬರುವ ಅನುದಾನ ಕಡಿತವಾಗಬಾರದು ಎಂದರು.

ಕೇಂದ್ರದ ಪಿಎಂಶ್ರೀ ಮತ್ತು ಪಿಎಂ ಉಷಾ ಯೋಜನೆಯಡಿ ಪ್ರತಿ ಶಾಲೆಗೆ ಕೇಂದ್ರದಿಂದ 1 ಕೋಟಿ ರೂ ಅನುದಾನ ಬರುತ್ತದೆ. ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ರಾಜ್ಯ ಶಿಕ್ಷಣ ನೀತಿ ಗೊಂದಲದಲ್ಲಿ ಯೋಜನೆಯಡಿ ಇರುವ ಅನುದಾನಕ್ಕೆ ತಡೆಯಾಗಬಾರದು. ದೆಹಲಿ ಪ್ರತಿನಿಧಿ ಮತ್ತು ಶಿಕ್ಷಣ ಕ್ಷೇತ್ರದಿಂದ ಆಯ್ಕೆಯಾದ ಪ್ರಕಾಶ ಹುಕ್ಕೇರಿ ಅವರು ವಿಶೇಷ ಪ್ರಯತ್ನ ಮಾಡಿ ಪಿಎಂಶ್ರೀ ಯೋಜನೆಯಡಿ ರಾಜ್ಯದ 560 ಶಾಲೆಗಳಿಗೆ ಅನುದಾನ ಕೊಡಬೇಕೆಂದು ಪ್ರಸ್ತಾವಣೆ ಕೇಂದ್ರಕ್ಕೆ ಹೋಗಿದೆ. ಪ್ರಕಾಶ ಹುಕ್ಕೇರಿ ಅವರು ಪ್ರಯತ್ನ ಮಾಡಿ ಅನುದಾನ ಬಿಡುಗಡೆ ಮಾಡಿಸಿ ಶಿಕ್ಷಣ ಕ್ಷೇತ್ರ ಅಭಿವೃದ್ಧಿಗೊಳಿಸಬೆಕು ಎಂದು ಒತ್ತಾಯಿಸಿದರು.

Tags:

error: Content is protected !!