khanapur

ಹಲಕರ್ಣಿಯ ಗಾಂಧಿನಗರದಲ್ಲಿ ಬಿದ್ದ ಮನೆ; ಪರಿಶೀಲನೆಗೆ ಬಾರದ ಗ್ರಾ.ಪಂ. ಅಧಿಕಾರಿಗಳು

Share

ಖಾನಾಪೂರ ತಾಲೂಕಿನ ಹಲಕರ್ಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಂಧಿನಗರದಲ್ಲಿ ಅತಿವೃಷ್ಠಿಗೆ ಮನೆಯೊಂದು ಕುಸಿದು ಬಿದ್ದಿದೆ. ಮಾಹಿತಿ ನೀಡಿದರೂ ಸಹ ಗ್ರಾಮ ಪಂಚಾಯತ ಅಧಿಕಾರಿಗಳು ಪರಿಶೀಲನೆಗೆ ಬಾರದ ಹಿನ್ನೆಲೆ ಅಸಮಾಧಾನ ವ್ಯಕ್ತವಾಗಿದೆ.

ಖಾನಾಪೂರ ತಾಲೂಕಿನ ಹಲಕರ್ಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಂಧಿನಗರದಲ್ಲಿ ಫಸ್ಟ್ ಕ್ರಾಸನಲ್ಲಿ ಕಮಲವ್ವ ಪರಶುರಾಮ ನಾಯಕ ಎಂಬುವರ ಮಳೆಯ ಅಬ್ಬರಕ್ಕೆ ಬಿದ್ದು ಸಂಪೂರ್ಣ ಹಾನಿಯಾಗಿದೆ. ಇದರ ಮಾಹಿತಿಯನ್ನು ನೀಡಿದರೂ ಸಹಿತ ಯಾವ ಅಧಿಕಾರಿಯೂ ಕೂಡಾ ಹೋಗಿ ಪರಿಶೀಲನೆ ನಡೆಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಇಂದು ತಾಲೂಕಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು, ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವ ಸಂದರ್ಭದಲ್ಲೇ ಈ ಹಲಕರ್ಣಿ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಇಷ್ಟು ನಿರ್ಲಕ್ಷ್ಯ ಧೋರಣೆ ಅನುಸರಿಸಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಉಂಟಾಗಿದೆ.

ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ

Tags:

error: Content is protected !!