ಹುಬ್ಬಳ್ಳಿ ತಾಲೂಕಿನ ಹೆಬಸೂರ ಗ್ರಾಮದಲ್ಲಿ ದಿ. ಎಸ್.ಆರ್. ಬೊಮ್ಮಾಯಿ ಅವರ ಪುತ್ಥಳಿಯನ್ನು ಸಂಸದ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ಅನಾವರಣ ಮಾಡಿದರು.
ನವಲಗುಂದ ವಿಧಾನಸಭಾ ಮತಕ್ಷೇತ್ರದ ಹುಬ್ಬಳ್ಳಿ ತಾಲೂಕಿನ ಹೆಬಸೂರ ಗ್ರಾಮದಲ್ಲಿನ ಶ್ರೀಮತಿ ಫಕ್ಕೀರಮ್ಮ ಕೊಂ. ಭ. ದೊಡ್ಡಗಾಣಿಗೇರ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಈ ಕಾಲೇಜಿನ ಸ್ಥಾಪನೆಗೆ ಕಾರಣೀಕರ್ತರಾದ ಮಾಜಿ ಮುಖ್ಯಮಂತ್ರಿಗಳು, ದಿ.ಎಸ್.ಆರ್. ಬೊಮ್ಮಾಯಿ ಅವರ ಪುತ್ಥಳಿಯನ್ನು ಸಂಸದ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ಶಾಸಕ ಎನ್.ಎಚ್.ಕೋನರಡ್ಡಿ ಅನಾವರಣ ಮಾಡಿದರು.