ಸಾಲಬಾಧೆ ತಾಳಲಾರದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕೋಡಿ ತಾಲೂಕಿನ ಮುಗಳಿ ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು ಈರಯ್ಯ ಅಪ್ಪಯ್ಯ ಹಿರೇಮಠ ಎಂದು ಗುರುತಿಸಲಾಗಿದೆ. ಮೃತ ಈರಯ್ಯ ವಿವಿಧ ಬ್ಯಾಂಕುಗಳಿಂದ ಮತ್ತು ಸ್ವಸಹಾಯ ಸಂಘಗಳಿಂದ ಸಾಲವನ್ನು ಪಡೆದಿದ್ದರು.
ಕಳೆದ ವರ್ಷ ಸಮರ್ಪಕ ಮಳೆ ಆಗದೇ ಇರುವುದರಿಂದ ಬೆಳೆಗಳು ಸಂಪೂರ್ಣವಾಗಿ ನಾಶವಾಗಿ ರೈತನು ಸಂಕಷ್ಟದಲ್ಲಿದ್ದನು. ಸಾಲವನ್ನು ಹೇಗೆ ತೀರಿಸುವುದು ಎನ್ನುವ ಆಲೋಚನೆಯಲ್ಲಿದ್ದಂತ ರೈತ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ಈರಯ್ಯನಿಗೆ ತಂದೆ -ತಾಯಿ ಪತ್ನಿ ಅವರ ಪುತ್ರನಿದ್ದಾನೆ. ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ