ಬಿಆರ್ಟಿಎಸ್ ಅವ್ಯವಸ್ಥೆಯ ವಿರುದ್ಧ ಜುಲೈ 15 ರಂದು ಬೃಹತ್ ಪ್ರತಿಭಟನಾ ಪಾದಯಾತ್ರೆ ನಡೆಸಲಾಗುವುದು ಎಂದು ಧಾರವಾಡ ಧ್ವನಿ ಜಿಲ್ಲಾಧ್ಯಕ್ಷ ಈಶ್ವರ ಶಿವಳ್ಳಿ ತಿಳಿಸಿದರು .
ಧಾರವಾಡ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಈಶ್ವರ ಶಿವಳ್ಳಿ , ನವಲೂರು ಬಡಾವಣೆಯಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು. ಈ ಹೋರಾಟವನ್ನು ಪಕ್ಷಾತೀತವಾಗಿ ರೂಪಿಸಲಾಗಿದ್ದು, ಬಿಆರ್ ಟಿಎಸ್ ರಸ್ತೆಯನ್ನು ಅಗಲೀಕರಣ ಮಾಡಬೇಕು ಹಾಗೂ ಜನರಿಗೆ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕೆಂದು ಆಗ್ರಹಿಸಲಾಗುವುದು ಎಂದು ತಿಳಿಸಿದರು.
ಧಾರವಾಡ ಜ್ಯುಬಿಲಿ ಸರ್ಕಲ್ ದಿಂದ ನವಲೂರು ವರೆಗೆ ಹಾಗೂ ಹುಬ್ಬಳ್ಳಿಯ ಉಣಕಲ್ ಕೆರೆಯಿಂದ ರಾಣಿ ಚನ್ನಮ್ಮ ಸರ್ಕಲ್ ವರೆಗೆ ಮಿನಿ ವಾಹನಗಳಿಗೆ (ಕಾರು, ಬೈಕ್, ಆಟೋರಿಕ್ಷಾ ಇತರೆ) ಎಚ್.ಡಿ. ಬಿ.ಆರ್.ಟಿ.ಎಸ್. ರಸ್ತೆಯಲ್ಲಿ ಸಂಚರಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಲಾಗುವುದು ಎಂದು ಹೇಳಿದ್ದರು .