Nippani

ಹುನ್ನರಗಿ ಗ್ರಾಮದ ಮನೆಗಳಿಗೆ ನುಗ್ಗಿದ ನೀರು ,ಜನ ಜಾನುವಾರು ಸ್ಥಳಾಂತರ

Share

ನಿಪ್ಪಾಣಿ ತಾಲೂಕಿನ ಹುನ್ನರಗಿ ಗ್ರಾಮದಲ್ಲಿ ವೇದಗಂಗಾ ನದಿಯ ನೀರು ಮನೆಗಳಿಗೆ ನುಗ್ಗಿದ ಪರಿಣಾಮ ಜನ ಜಾನುವಾರುಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ.

ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು, ಪರಿಣಾಮ ವೇದಗಂಗಾ ನದಿಯು ಉಕ್ಕಿ ಹರಿಯುತ್ತಿದೆ. ಇದರಿಂದ ನದಿಯು ತನ್ನ ಪಾತ್ರವನ್ನು ಬಿಟ್ಟು ಹರಿಯುತ್ತಿದೆ. ಸದ್ಯ ವೇದಗಂಗಾ ನದಿಗೆ ಭಾರಿ ಪ್ರಮಾಣದ ಪ್ರವಾಹ ಉಂಟಾಗಿದೆ. ನಿಪ್ಪಾಣಿ ತಾಲೂಕಿನ ಹುನ್ನರಗಿ ಗ್ರಾಮದ ಸುಮಾರು 35 ಮನೆಗಳಿಗೆ ನೀರು ನುಗ್ಗಿದೆ. ಜನರು ತಮ್ಮ ಮನೆಯಲ್ಲಿದ್ದಂತಹ ಮಹತ್ವದ ವಸ್ತುಗಳನ್ನು ಹಾಗೂ ಜಾನುವಾರುಗಳನ್ನು ತೆಗೆದುಕೊಂಡು ಹೋಗುತ್ತಿದ್ದಾರೆ. ಈಗಾಗಲೇ 135 ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.

Tags:

error: Content is protected !!